
ಕೋಲ್ಕತಾ(ಜು.08): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಇಂದು 46ನೇ ವಸಂತಕ್ಕೆ ಕಾಲಿರಿಸಿದ್ದು, ಕೋಲ್ಕತಾ ಸೇರಿದಂತೆ ದೇಶದ ಹಲವೆಡೆ ಅವರ ಅಭಿಮಾನಿಗಳು ಸಿಹಿ ಹಂಚುವುದರ ಮೂಲಕ ಸಂತಸದಿಂದ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.
ಇದೇ ವೇಳೆ ಅವರ ನಿವಾಸದ ಸಮೀಪ ನೂತನವಾಗಿ ನಿರ್ಮಾಣವಾಗುತ್ತಿರುವ ಮೆಟ್ರೊ ನಿಲ್ದಾಣಕ್ಕೆ ಅವರ ಹೆಸರಿಡಬೇಕೆಂದು ದಾದಾ ಅಭಿಮಾನಿಗಳು ಒತ್ತಾಯಿಸಿದ್ದಾರೆ.
ಈ ಕುರಿತು ಕೇಂದ್ರ ಸರ್ಕಾರಕ್ಕೂ ಪತ್ರ ಬರೆಯಲಾಗುವುದು ಹಾಗೂ ಸ್ಥಳೀಯ ಸಂಸದರ ಮೇಲೆ ಒತ್ತಡ ಹೇರಲಾಗುವುದು ಎಂದು ಗಂಗೂಲಿ ಅಭಿಮಾನಿಗಳು ತಿಳಿಸಿದ್ದಾರೆ.
ಕೆಲಸದ ನಿಮಿತ್ತ ಗಂಗೂಲಿ ಮುಂಬೈನಲ್ಲಿದ್ದು, ಅವರು ಆಗಮಿಸುವ ತನಕ ಅವರ ನಿವಾಸದ ಬಳಿ ಕಾಯುತ್ತೇವೆ ಎಂದಿದ್ದಾರೆ.
ಗಂಗೂಲಿ ಅವರು ಇಲ್ಲದಿದ್ದರು ಇಲ್ಲಿನ ಅವರ ನಿವಾಸದ ಮುಂದೆ ಅಭಿಮಾನಿಗಳು ಮುಂಜಾನೆಯಿಂದಲೂ ಹುಟ್ಟುಹಬ್ಬದ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.