ರಾಹುಲ್ ದ್ರಾವಿಡ್‌ಗೆ ನೋಟೀಸ್; BCCI ವಿರುದ್ಧ ಕ್ರಿಕೆಟಿಗರು ಗರಂ!

By Web DeskFirst Published Aug 7, 2019, 3:41 PM IST
Highlights

ರಾಹುಲ್ ದ್ರಾವಿಡ್‌ಗೆ BCCI ನೋಟಿಸ್ ನೀಡಿದ ಬೆನ್ನಲ್ಲೇ ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗರು ಬಿಗ್‌ಬಾಸ್ ವಿರುದ್ದ ತಿರುಗಿ ಬಿದ್ದಿದ್ದಾರೆ. ರಾಹುಲ್ ನೋಟೀಸ್ ಕುರಿತು ಸೌರವ್ ಗಂಗೂಲಿ ಹಾಗೂ ಹರ್ಭಜನ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.

ಮುಂಬೈ(ಆ.07):  ಟೀಂ ಇಂಡಿಯಾ ಮಾಜಿ ನಾಯಕ, ಭಾರತ ಅಂಡರ್ 19 ತಂಡದ ಕೋಚ್ ರಾಹುಲ್ ದ್ರಾವಿಡ್‌ಗೆ ಬಿಸಿಸಿಐ ನೋಟಿಸ್ ನೀಡಿದೆ. ಸ್ವಹಿತಾಸಕ್ತಿ ಸಂಘರ್ಷದ ಕಾರಣಕ್ಕೆ ದ್ರಾವಿಡ್‌ಗೆ ಬಿಗ್‌ಬಾಸ್‌ಗಳು ನೋಟಿಸ್ ಜಾರಿ ಮಾಡಿದ್ದಾರೆ. 2 ವಾರದಲ್ಲಿ ಉತ್ತರ ನೀಡುವಂತೆಯೂ ಸೂಚಿಸಲಾಗಿದೆ. ಆದರೆ ಬಿಸಿಸಿಐ ನಡೆಯನ್ನು ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗರು ವಿರೋಧಿಸಿದ್ದಾರೆ.

ಇದನ್ನೂ ಓದಿ: ದ್ರಾವಿಡ್‌ಗೆ BCCI ನೋಟಿಸ್; 2 ವಾರದಲ್ಲಿ ನೀಡಬೇಕಿದೆ ಉತ್ತರ!

ಮಾಜಿ ನಾಯಕ ಸೌರವ್ ಗಂಗೂಲಿ ಹಾಗೂ ಹರ್ಭಜನ್ ಸಿಂಗ್ ಬಿಸಿಸಿಐ ವಿರುದ್ಧ ಆಕ್ರೋಷ ವ್ಯಕ್ತಪಡಿಸಿದ್ದಾರೆ. ಸ್ವಹಿತಾಸಕ್ತಿ ಸಂಘರ್ಷ ಕಾರಣವೊಡ್ಡಿ ನೋಟಿಸ್ ನೀಡುವುದು ಇದೀಗ ಬಿಸಿಸಿಐ ಫ್ಯಾಶನ್ ಆಗಿದೆ. ಈ ಮೂಲಕ ಸದ ಕಾಲ ಸುದ್ದಿಯಲ್ಲಿರಲು ಬಯಸುತ್ತಿದೆ. ರಾಹುಲ್ ದ್ರಾವಿಡ್‌ಗೆ ಬಿಸಿಸಿಐ ನೋಟಿಸ್ ನೀಡಿದೆ. ಭಾರತೀಯ ಕ್ರಿಕೆಟ್‌ನ್ನು ದೇವರೇ ಕಾಪಾಡಬೇಕು ಎಂದು ಗಂಗೂಲಿ ಟ್ವೀಟ್ ಮಾಡಿದ್ದಾರೆ. 

ಇದನ್ನೂ ಓದಿ: ಮೋದಿ ಸರ್ಕಾರದ ಬಳಿಕ ಲಡಾಖ್‌ಗೆ BCCI ಅಭಯ!

ಗಂಗೂಲಿ ಬೆನ್ನಲ್ಲೇ ಹರ್ಭಜನ್ ಸಿಂಗ್ ಕೂಡ ಟ್ವೀಟ್ ಮಾಡಿದ್ದಾರೆ. ಎತ್ತ ಸಾಗುತ್ತಿದೆ? ಇದು ಆತಂಕಕಾರಿ ಬೆಳವಣಿಗೆ. ರಾಹುಲ್ ದ್ರಾವಿಡ್‌ಗಿಂತ ಉತ್ಯುತ್ತಮ ಆಟಗಾರ ಹಾಗೂ ವ್ಯಕ್ತಿ ಭಾರತೀಯ ಕ್ರಿಕೆಟ್‌ನಲ್ಲಿ ಇಲ್ಲ. ಈ ದಿಗ್ಗಜನಿಗೆ ನೋಟಿಸ್ ನೀಡೋ ಮೂಲಕ ಬಿಸಿಸಿಐ ಅವಮಾನ ಮಾಡಿದೆ. ಭಾರತದ ಕ್ರಿಕೆಟ್ ಅಭಿವೃದ್ದಿಗೆ ದ್ರಾವಿಡ್ ಸೇವೆ ಅಗತ್ಯ. ನಿಜ. ದೇವರೇ ಕಾಪಾಡಬೇಕು ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.

 

Really ?? Don’t know where it’s heading to.. u can’t get better person thn him for indian cricket. Sending notice to these legends is like insulting them.. cricket need their services for betterment.. yes god save indian cricket 🙏 https://t.co/lioRClBl4l

— Harbhajan Turbanator (@harbhajan_singh)
click me!