ಮೈಂಡ್ ಗೇಮ್ ಕುರಿತು ದಾದಾ ಪುಸ್ತಕ ಬರೆಯುತ್ತಿದ್ದಾರೆ..!

Published : Nov 02, 2017, 05:17 PM ISTUpdated : Apr 11, 2018, 12:54 PM IST
ಮೈಂಡ್ ಗೇಮ್ ಕುರಿತು ದಾದಾ ಪುಸ್ತಕ ಬರೆಯುತ್ತಿದ್ದಾರೆ..!

ಸಾರಾಂಶ

ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾ 2003ರ ಏಕದಿನ ವಿಶ್ವಕಪ್'ನಲ್ಲಿ ಫೈನಲ್ ಪ್ರವೇಶಿಸಿತ್ತು. ಇದಕ್ಕೂ 2002 ಚಾಂಪಿಯನ್ಸ್ ಟ್ರೋಫಿಯಲ್ಲಿ ಶ್ರೀಲಂಕಾ ಜತೆ ಜಂಟಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಅಲ್ಲದೇ ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್ ಹಾಗೂ ವೆಸ್ಟ್'ಇಂಡಿಸ್ ನೆಲದಲ್ಲೂ ಭಾರತ ಗೆಲುವಿನ ನಗೆ ಬೀರಿತ್ತು.

ಕೋಲ್ಕತಾ(ನ.02): ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಕ್ರೀಡೆಯಲ್ಲಿನ ‘ಮೈಂಡ್ ಗೇಮ್’ ಕುರಿತು ಪುಸ್ತಕವೊಂದನ್ನು ಬರೆಯುತ್ತಿದ್ದಾರಂತೆ.

ಈ ಕುರಿತು ಪ್ರತಿಕ್ರಿಯಿಸಿರುವ ಗಂಗೂಲಿ, ‘ಬಹಳ ಕಾಲದಿಂದ ಪುಸ್ತಕ ಬರೆಯಲು ಯತ್ನಿಸುತ್ತಿದ್ದೆ ಸಾಧ್ಯವಾಗಿರಲಿಲ್ಲ. ನಾನೇನು ಶ್ರೇಷ್ಠ ಬರಹಗಾರನಲ್ಲ. ಆಟದಲ್ಲಿ ಪ್ರಗತಿ ಸಾಧಿಸಲು ಆಟಗಾರರ ಮನಸ್ಥಿತಿ ಬಹಳ ಪ್ರಮುಖವಾದುದು. ಈ ಅಂಶಗಳನ್ನು ಪುಸ್ತಕ ಒಳಗೊಂಡಿದ್ದು, ಮೈಂಡ್‌'ಗೇಮ್‌'ಗಳು ಆಟದ ಭಾಗವಾಗಿ ಹೋಗಿರುವುದು ಬೇಸರದ ಸಂಗತಿ’ ಎಂದು ತಿಳಿಸಿದರು.

‘ಇನ್ನು ಆತ್ಮಚರಿತ್ರೆ ರಚನೆ ಕುರಿತು ನಾನು ಇನ್ನೂ ಯೋಚನೆ ಮಾಡಿಲ್ಲ’ ಎಂದು ಇದೇ ವೇಳೆ ಗಂಗೂಲಿ ಹೇಳಿದರು.

ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾ 2003ರ ಏಕದಿನ ವಿಶ್ವಕಪ್'ನಲ್ಲಿ ಫೈನಲ್ ಪ್ರವೇಶಿಸಿತ್ತು. ಇದಕ್ಕೂ 2002 ಚಾಂಪಿಯನ್ಸ್ ಟ್ರೋಫಿಯಲ್ಲಿ ಶ್ರೀಲಂಕಾ ಜತೆ ಜಂಟಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಅಲ್ಲದೇ ಪಾಕಿಸ್ತಾನ, ಆಸ್ಟ್ರೇಲಿಯಾ, ಇಂಗ್ಲೆಂಡ್ ಹಾಗೂ ವೆಸ್ಟ್'ಇಂಡಿಸ್ ನೆಲದಲ್ಲೂ ಭಾರತ ಗೆಲುವಿನ ನಗೆ ಬೀರಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ICC Men’s T20 World Cup: ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ಅಚ್ಚರಿಯ ಆಯ್ಕೆ, ಗಿಲ್‌ಗಿಲ್ಲ ಸ್ಥಾನ
ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ