ಅನಾವರಣಗೊಳ್ಳಲು ಸಿದ್ಧವಾಗಿದೆ ಗಂಗೂಲಿ ಕಂಚಿನ ಪ್ರತಿಮೆ

Published : May 21, 2017, 05:52 PM ISTUpdated : Apr 11, 2018, 01:07 PM IST
ಅನಾವರಣಗೊಳ್ಳಲು ಸಿದ್ಧವಾಗಿದೆ ಗಂಗೂಲಿ ಕಂಚಿನ ಪ್ರತಿಮೆ

ಸಾರಾಂಶ

"ಕಳೆದ ಎಂಟು-ಹತ್ತು ವರ್ಷಗಳಲ್ಲಿ ಉಭಯ ತಂಡಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪಾಕಿಸ್ತಾನಕ್ಕೆ ಹೋಲಿಸಿದರೆ ಟೀಂ ಇಂಡಿಯಾ ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟು ಬಲಿಷ್ಟವಾಗಿದೆ"

ಕೋಲ್ಕತಾ(ಮೇ.21):  ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಅವರು ಕ್ರಿಕೆಟ್‌'ಗೆ ಸಲ್ಲಿಸಿರುವ ಕೊಡುಗೆಯನ್ನು ಪರಿಗಣಿಸಿ, ಕ್ರೀಡಾಂಗಣದಲ್ಲಿ ಅವರ ಕಂಚಿನ ಪ್ರತಿಮೆ ಸ್ಥಾಪನೆಗೆ ಪಶ್ಚಿಮ ಬಂಗಾಳದ ದಕ್ಷಿಣ ದಿನಜ್‌ಪುರ ಜಿಲ್ಲಾ ಕ್ರೀಡಾ ಸಂಸ್ಥೆ ಮುಂದಾಗಿದೆ.

ಸುಮಾರು 8 ಅಡಿ ಉದ್ದದ ಸೌರವ್‌ ಗಂಗೂಲಿ ಪ್ರತಿಮೆ ನಿರ್ಮಾಣ ಕಾರ್ಯ ಭರದಿಂದ ಸಾಗಿದ್ದು, ದಿನಜ್‌'ಪುರ ಜಿಲ್ಲೆಯ ಬಾಲೂರ್‌'ಘಾಟ್‌ ಕ್ರೀಡಾಂಗಣದಲ್ಲಿ ಮೂರ್ತಿ ಪ್ರತಿಷ್ಠಾಪನೆಗೊಳ್ಳಲಿದೆ. 

ಸದ್ಯ ಐಸಿಸಿ ಚಾಂಪಿಯನ್ಸ್‌ ಟ್ರೋಫಿಯಲ್ಲಿ ವೀಕ್ಷಣೆ ವಿವರಣೆ ನೀಡಲು ಗಂಗೂಲಿ ಇಂಗ್ಲೆಂಡ್‌'ಗೆ ತೆರಳಲಿದ್ದು, ಅಲ್ಲಿಂದ ಹಿಂದಿರುಗಿದ ಬಳಿಕ ಅವರೇ ಸ್ವತಃ ಆಗಮಿಸಿ ತಮ್ಮ ಪತ್ರಿಮೆ ಅನಾವರ­ಣಗೊಳಿಸಲಿದ್ದಾರೆ ಎಂದು ಸಂಸ್ಥೆ ತಿಳಿಸಿದೆ.

ಭಾರತ ಹಾಗೂ ಪಾಕಿಸ್ತಾನ ತಂಡಗಳು ಮೊದಲ ಪಂದ್ಯದಲ್ಲೇ ಮುಖಾಮುಖಿಯಾಗುತ್ತಿರುವ ಕುರಿತಂತೆ ಪ್ರತಿಕ್ರಿಯಿಸಿರುವ ಸೌರವ್, "ಕಳೆದ ಎಂಟು-ಹತ್ತು ವರ್ಷಗಳಲ್ಲಿ ಉಭಯ ತಂಡಗಳಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಪಾಕಿಸ್ತಾನಕ್ಕೆ ಹೋಲಿಸಿದರೆ ಟೀಂ ಇಂಡಿಯಾ ಎಲ್ಲಾ ಕ್ಷೇತ್ರಗಳಲ್ಲೂ ಸಾಕಷ್ಟು ಬಲಿಷ್ಟವಾಗಿದೆ" ಎಂದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇದೇ ನನ್ನ ಮೊದಲ ಬ್ಯಾಟ್‌, ತೆಂಗಿನ ಹೆಡೆಯನ್ನು ವೇದಿಕೆಗೆ ತಂದು ತೋರಿಸಿದ ಟೀಮ್‌ ಇಂಡಿಯಾ ಬ್ಯಾಟರ್‌!
CSK ಫ್ರಾಂಚೈಸಿಗೆ ಬಲವಾದ ಹೊಡೆತ; ಗಾಯದಿಂದಾಗಿ ತಂಡದ ಕ್ಯಾಪ್ಟನ್‌ ಟೂರ್ನಿಯಿಂದಲೇ ಔಟ್!