
ಬೆಂಗಳೂರು(ಸೆ.22): ಸೌತ್ ಆಫ್ರಿಕಾ ವಿರುದ್ಧದ 3ನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ನೀಡಲು ವಿಫಲವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಭಾರತ 9 ವಿಕೆಟ್ ನಷ್ಟಕ್ಕೆ 134 ರನ್ ಸಿಡಿಸಿದೆ. ಈ ಮೂಲಕ ಸೌತ್ ಆಫ್ರಿಕಾ ತಂಡಕ್ಕೆ ಸುಲಭ ಗುರಿ ನೀಡಿದೆ.
ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ ಆರಂಭದಲ್ಲೇ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ರೋಹಿತ್ 9 ರನ್ ಸಿಡಿಸಿ ನಿರ್ಗಮಿಸಿದರು. ಹೋರಾಟ ನೀಡಿದ ಶಿಖರ್ ಧವನ್ 36 ರನ್ ಕಾಣಿಕೆ ನೀಡಿದರು. ಧವನ್ ಪೆವಿಲಿಯನ್ ಸೇರಿದ ಬೆನ್ನಲ್ಲೇ, ನಾಯಕ ವಿರಾಟ್ ಕೊಹ್ಲಿ 9 ರನ್ ಸಿಡಿಸಿ ನಿರ್ಗಮಿಸಿದರು.
68 ರನ್ಗಳಿಗೆ 3 ವಿಕೆಟ್ ಕಳೆದುಕೊಂಡ ಭಾರತಕ್ಕೆ ರಿಷಬ್ ಪಂತ್ 19 ರನ್ ಸಿಡಿಸಿ ಚೇತರಿಕೆ ನೀಡೋ ಪ್ರಯತ್ನ ಮಾಡಿದರು. ಶ್ರೇಯಸ್ ಅಯ್ಯರ್ 5, ಕ್ರುನಾಲ್ ಪಾಂಡ್ಯ 4 ರನ್ ಸಿಡಿಸಿ ಔಟಾದರು. ರವೀಂದ್ರ ಜಡೇಜಾ 19 ರನ್ ಸಿಡಿಸಿದರು. ಹಾರ್ದಿಕ್ ಪಾಂಡ್ಯ 14 ರನ್ ಕಾಣಿಕೆ ನೀಡಿದರು. ಈ ಮೂಲಕ ಟೀಂ ಇಂಡಿಯಾ 9 ವಿಕೆಟ್ ನಷ್ಟಕ್ಕೆ 134 ರನ್ ಸಿಡಿಸಿತು. ಇದೀಗ ಸೌತ್ ಆಫ್ರಿಕಾ ಗೆಲುವಿಗೆ 125 ರನ್ ಸಿಡಿಸಬೇಕಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.