
ನವದೆಹಲಿ (ಡಿ. 28): ಭಾರತೀಯ ಒಲಂಪಿಕ್ ಸಂಸ್ಥೆಯ ಅಜೀವ ಅಧ್ಯಕ್ಷರಾಗಿ ನೇಮಕವಾಗಿದ್ದ ಸುರೇಶ್ ಕಲ್ಮಾಡಿ 24 ಗಂಟೆಯೊಳಗಾಗಿ ತಮ್ಮ ಸ್ಥಾನ ಕಳೆದುಕೊಂಡಿದ್ದಾರೆ.
ಇವರ ನೇಮಕ ಪ್ರಶ್ನಿಸಿ ಕ್ರೀಡಾ ಸಚಿವಾಲಯವು ಐಒಎ ಗೆ ಶೋಕಾಸ್ ನೋಟಿಸ್ ನೀಡಿತ್ತು. 2010 ರ ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ನಡೆದ ಭ್ರಷ್ಟಾಚಾರ ಹಗರಣದಲ್ಲಿ ಸುರೇಶ್ ಕಲ್ಮಾಡಿ ಹೆಸರು ಕೇಳಿ ಬಂದಿತ್ತು. ಇವರಿಗೆ ಒಲಂಪಿಕ್ ಅಜೀವ ಅಧ್ಯಕ್ಷ ಸ್ಥಾನ ನೀಡಿದ್ದು ಸಾಕಷ್ಟು ಟೀಕೆ, ಪ್ರತಿರೋಧಕ್ಕೆ ಕಾರಣವಾಗಿತ್ತು.
ಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಕಳಂಕ ಹೊತ್ತಿರುವ ಸುರೇಶ್ ಕಲ್ಮಾಡಿ ಹಾಗೂ ಚೌತಾಲ ನೇಮಕಾತಿಯನ್ನು ಒಪ್ಪಿಕೊಳ್ಳಲಾಗುವುದಿಲ್ಲವೆಂದು ಕ್ರೀಡಾ ಸಚಿವ ವಿಜಯ್ ಗೋಯಲ್ ಹೇಳಿದ್ಧಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.