
ಬೆಂಗಳೂರು(ಮೇ.17): ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ ರೈಸಿಂಗ್ ಪುಣೆ ಸೂಪರ್'ಜೈಂಟ್ ತಂಡ 10ನೇ ಆವೃತ್ತಿಯಲ್ಲಿ ಫೈನಲ್ ಪ್ರವೇಶಿಸಿದೆ.
ಇದೀಗ ಎಲಿಮಿನೇಟರ್ ಪಂದ್ಯವು ಇಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಕೋಲ್ಕತ ನೈಟ್'ರೈಡರ್ಸ್ ಹಾಗೂ ಹಾಲಿ ಚಾಂಪಿಯನ್ ಸನ್'ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಈ ಪಂದ್ಯದಲ್ಲಿ ವಿಜೇತವಾದ ತಂಡವು ಮುಂಬೈ ಇಂಡಿಯನ್ಸ್ ಎದುರು ಸೆಣಸಲಿದೆ.
ಇದೀಗ ಹೊಸ ವಿಷ್ಯಾ ಏನಪ್ಪಾ ಅಂದ್ರೆ, ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಮಳೆಯಿಂದ ಪಂದ್ಯ ರದ್ದಾಗಿದ್ದನ್ನು ನೋಡಿದ್ದೇವೆ. ಹಾಗಾಗಿ ಇಂದೇನಾದರು ಪಂದ್ಯ ರದ್ದಾದರೆ ಏನಾಗಬಹುದು ಎಂದು ಯೋಚಿಸುತ್ತಿದ್ದರೆ ಇಲ್ಲಿದೆ ನೋಡಿ ಉತ್ತರ...
ಇಂದಿನ ಪಂದ್ಯ ರದ್ದಾದರೆ, ಗ್ರೂಪ್ ಹಂತದಲ್ಲಿ ಅಗ್ರಸ್ಥಾನ ಪಡೆದ ತಂಡ ಎರಡನೇ ಕ್ವಾಲಿಫೈಯರ್ ಪಂದ್ಯ ಆಡಲಿದೆ. ಅಂದರೆ ಸನ್'ರೈಸರ್ಸ್ ಹೈದರಾಬಾದ್ ತಂಡ ಮುಂಬೈ ತಂಡದೆದುರು ಮುಖಾಮುಖಿಯಾಗಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.