
ಮುಂಬೈ[ಮಾ.28]: ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ದೇಸಿ ಏಕದಿನ ಟೂರ್ನಿಯಲ್ಲಿ ಆಡಬೇಕು ಎನ್ನುವ ಶ್ರೀಲಂಕಾ ಕ್ರಿಕೆಟ್ ಮಂಡಳಿ ನಿಯಮಕ್ಕೆ ಹೆದರಿ, ಐಪಿಎಲ್ಗೆ ಕೈಕೊಟ್ಟು ತವರಿಗೆ ತೆರಳಿದ್ದ ಲಸಿತ್ ಮಾಲಿಂಗ ಈಗ ಮುಂಬೈ ಇಂಡಿಯನ್ಸ್ ತಂಡಕ್ಕೆ ಮರಳಿದ್ದಾರೆ.
ಎಲ್ಲಾ ಮಾದರಿಯ ಕ್ರಿಕೆಟ್’ಗೆ ವಿದಾಯ: ನಿರ್ಧಾರ ಪ್ರಕಟಿಸಿದ ಮಾಲಿಂಗ..!
ಮಾಲಿಂಗ ಲಂಕಾಕ್ಕೆ ಹೋಗಲಿದ್ದಾರೆ ಎನ್ನುವ ಮಾಹಿತಿ ಮುಂಬೈ ತಂಡಕ್ಕಿರಲಿಲ್ಲ. ಲಂಕಾ ಮಂಡಳಿ ಒಪ್ಪಿಗೆ ಸೂಚಿಸಿದ ನಂತರವೇ ಮಾಲಿಂಗಗೆ ಆಟಗಾರರ ಹರಾಜಿನಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಬಿಸಿಸಿಐ, ಲಂಕಾ ಕ್ರಿಕೆಟ್ ಮಂಡಳಿಯನ್ನು ತರಾಟೆಗೆ ತೆಗೆದುಕೊಂಡು, ವೇಗಿಯನ್ನು ವಾಪಸ್ ಕಳುಹಿಸುವಂತೆ ಒತ್ತಡ ಹೇರಿತು. ಬಿಸಿಸಿಐ ಒತ್ತಡಕ್ಕೆ ಮಣಿದು ಲಂಕಾ, ಮಾಲಿಂಗಗೆ ಐಪಿಎಲ್ನಲ್ಲಿ ಆಡಲು ಅನುಮತಿ ನೀಡಿತು ಎಂದು ವರದಿಯಾಗಿದೆ.
IPL ಜೋಶ್: ಗರಿಷ್ಠ ವಿಕೆಟ್ ಕಬಳಿಸಿದ ಟಾಪ್ 10 ಬೌಲರ್'ಗಳಿವರು
ಐಪಿಎಲ್’ನಲ್ಲಿ ಗರಿಷ್ಠ ವಿಕೆಟ್ ಪಡೆದ ಬೌಲರ್ ಆಗಿ ಹೊರಹೊಮ್ಮಿರುವ ಲಸಿತ್ ಮಾಲಿಂಗ[154] ಲಭ್ಯತೆ ಮುಂಬೈ ತಂಡದ ಬೌಲಿಂಗ್ ಬಲವನ್ನು ಹೆಚ್ಚಿಸಿದೆ. ಈಗಾಗಲೇ ಡೆಲ್ಲಿ ವಿರುದ್ಧ ತವರಿನಲ್ಲೇ ಮುಖಭಂಗ ಅನುಭವಿಸಿರುವ ಮುಂಬೈ ಇಂಡಿಯನ್ಸ್ ತಂಡವು ಇಂದು ಬೆಂಗಳೂರಿನಲ್ಲಿ RCB ತಂಡವನ್ನು ಎದುರಿಸಲು ಸಜ್ಜಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.