
ಕೊಲಂಬೊ(ಅ.14): ಪಾಕಿಸ್ತಾನ ವಿರುದ್ಧ ಸದ್ಯ ಯುಎಇನಲ್ಲಿ ಸೀಮಿತ ಓವರ್ ಸರಣಿ ಚಾಲ್ತಿಯಲ್ಲಿದ್ದು, ಏಕದಿನ ಸರಣಿ ಬಳಿಕ 3 ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿಯ 3ನೇ ಹಾಗೂ ಕೊನೆ ಪಂದ್ಯ ಲಾಹೋರ್'ನಲ್ಲಿ ನಡೆಯಬೇಕಿದ್ದು, ಪಾಕಿಸ್ತಾನಕ್ಕೆ ತೆರಳಲು ಶ್ರೀಲಂಕಾ ಆಟಗಾರರು ನಿರಾಕರಿಸಿದ್ದಾರೆ.
ಇದೇ ತಿಂಗಳ 29ರಂದು ನಡೆಯಬೇಕಿರುವ ಪಂದ್ಯವನ್ನು ಲಾಹೋರ್'ನಿಂದ ಸ್ಥಳಾಂತರಿಸಲು ಸದ್ಯ ಸರಣಿಯಲ್ಲಿ ಆಡುತ್ತಿರುವ ಆಟಗಾರರು ಸೇರಿದಂತೆ ಗುತ್ತಿಗೆ ಹೊಂದಿರುವ ಒಟ್ಟು 40 ಆಟಗಾರರು ಶ್ರೀಲಂಕಾ ಕ್ರಿಕೆಟ್ ಮಂಡಳಿಗೆ ಪತ್ರ ಬರೆದಿದ್ದಾರೆ.
ಇತ್ತೀಚೆಗಷ್ಟೇ ವಿಶ್ವ ಇಲೆವನ್ ತಂಡವು ಪಾಕಿಸ್ತಾನದಲ್ಲಿ 3 ಟಿ20 ಪಂದ್ಯಗಳನ್ನಾಡಿತ್ತು. 2009ರಲ್ಲಿ ಶ್ರೀಲಂಕಾ ಆಟಗಾರರಿದ್ದ ಬಸ್ ಮೇಲೆ ಉಗ್ರರು ದಾಳಿ ನಡೆಸಿದ ನಂತರ ಪಾಕಿಸ್ತಾನದ ನೆಲದಲ್ಲಿ ಕ್ರಿಕೆಟ್ ಆಡಲು ಯಾವ ತಂಡವು ಮುಂದೆ ಬರುತ್ತಿಲ್ಲ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.