ಮಂಗನಿಗೇನು ಗೊತ್ತು..? ಮಾಲಿಂಗ ಹೀಗೆ ಹೇಳಿದ್ದು ಯಾರಿಗೆ ಗೊತ್ತಾ..?

Published : Jun 22, 2017, 11:07 PM ISTUpdated : Apr 11, 2018, 01:12 PM IST
ಮಂಗನಿಗೇನು ಗೊತ್ತು..? ಮಾಲಿಂಗ ಹೀಗೆ ಹೇಳಿದ್ದು ಯಾರಿಗೆ ಗೊತ್ತಾ..?

ಸಾರಾಂಶ

ಮಾಧ್ಯಮಗಳಿಗೆ ಹೇಳಿಕೆ ನೀಡುವ ಸಂದರ್ಭದಲ್ಲಿ ಮಾಲಿಂಗ, ಕ್ರೀಡಾ ಸಚಿವ ದಯಾಸಿರಿ ಜಯಸೇಖರ ಅವರಿಗೆ ಕ್ರಿಕೆಟ್ ಬಗ್ಗೆ ಮಂಗನಿಗೇನು ಗೊತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಕೊಲಂಬೊ(ಜೂ.22): ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪ್ರವೇಶಿಸದ ಶ್ರೀಲಂಕಾದ ಕ್ರಿಕೆಟ್ ಆಟಗಾರರ ಸಾಮರ್ಥ್ಯದ ಬಗ್ಗೆ ಟೀಕಿಸಿದ್ದ ಲಂಕಾದ ಕ್ರೀಡಾ ಸಚಿವರನ್ನು ‘ಕೋತಿ’ಗೆ ಹೋಲಿಕೆ ಮಾಡಿದ ಪ್ರಕರಣ ಸಂಬಂಧ ಶ್ರೀಲಂಕಾದ ವೇಗಿ ಲಸಿತಾ ಮಾಲಿಂಗ ಅವರನ್ನು ವಿಚಾರಣೆ ನಡೆಸಲಾಯಿತು.

ಮಾಧ್ಯಮಗಳಿಗೆ ಹೇಳಿಕೆ ನೀಡುವ ಸಂದರ್ಭದಲ್ಲಿ ಮಾಲಿಂಗ, ಕ್ರೀಡಾ ಸಚಿವ ದಯಾಸಿರಿ ಜಯಸೇಖರ ಅವರಿಗೆ ಕ್ರಿಕೆಟ್ ಬಗ್ಗೆ ಮಂಗನಿಗೇನು ಗೊತ್ತು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.

ಇದನ್ನು ಗಂಭೀರವಾಗಿ ಪರಿಗಣಿಸಿದ ಸಚಿವರು, ಹೇಳಿಕೆ ಕುರಿತು ತನಿಖೆ ನಡೆಸುವಂತೆ ಸೂಚಿಸಿದ್ದರು. ‘ನಾನು ಯಾವುದೇ ಒಬ್ಬ ಆಟಗಾರರನ್ನು ಉದ್ದೇಶಿಸಿ ಟೀಕೆ ಮಾಡಿರಲಿಲ್ಲ. ಎಲ್ಲಾ ಆಟಗಾರರ ದೈಹಿಕ ಸಾಮರ್ಥ್ಯದ ಬಗ್ಗೆ ಟೀಕಿಸಿದ್ದೆ. ಮಾಲಿಂಗ ಹೆಸರನ್ನು ಎಲ್ಲಿಯೂ ಬಳಸಿರಲಿಲ್ಲ. ಆದರೆ, ಅವರು ಸಾರ್ವಜನಿಕವಾಗಿ ನನ್ನನ್ನು ಹೀಯ್ಯಾಳಿಸಿದ್ದಾರೆ. ಎಂದು ಕ್ರೀಡಾ ಸಚಿವ ದಯಾಸಿರಿ ಜಯಸೇಖರ ತಿಳಿಸಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಐಪಿಎಲ್ ಹರಾಜಿನಲ್ಲಿ ₹25.20 ಕೋಟಿ ಪಡೆದ ಕ್ಯಾಮರೂನ್ ಗ್ರೀನ್‌ಗೆ ಕೊಡುವ ಮೊತ್ತ ₹18 ಕೋಟಿ ಮಾತ್ರ
ಕೇವಲ 30 ಲಕ್ಷ ಮೂಲ ಬೆಲೆ ಹೊಂದಿದ್ದ ಮಂಗೇಶ್ ಯಾದವ್ 5.2 ಕೋಟಿಗೆ ಆರ್‌ಸಿಬಿ ಪಾಲು? ಅಷ್ಟಕ್ಕೂ ಯಾರು ಈ ಎಡಗೈ ವೇಗಿ?