ತಿಂಗಳೊಳಗೆ ನಾಯಕತ್ವ ಕಳೆದುಕೊಂಡ ಪೆರೇರಾ

Published : Jan 05, 2018, 12:53 PM ISTUpdated : Apr 11, 2018, 12:59 PM IST
ತಿಂಗಳೊಳಗೆ ನಾಯಕತ್ವ ಕಳೆದುಕೊಂಡ ಪೆರೇರಾ

ಸಾರಾಂಶ

ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ತಂಡವು ಬಾಂಗ್ಲಾದೇಶ ಪ್ರವಾಸವನ್ನು ಕೈಗೊಳ್ಳುತ್ತಿದ್ದು, ಆ ವೇಳೆಗೆ ನೂತನ ನಾಯಕ ದ್ವೀಪ ರಾಷ್ಟ್ರದ ತಂಡವನ್ನು ಮುನ್ನಡೆಸಲಿದ್ದಾರೆ.

ಕೊಲಂಬೊ(ಜ.05): ಶ್ರೀಲಂಕಾ ಏಕದಿನ ಕ್ರಿಕೆಟ್ ತಂಡದ ನಾಯಕತ್ವವನ್ನು ತಿಸಾರ ಪೆರೇರಾ ಕಳೆದುಕೊಂಡಿದ್ದು, ಮುಂದಿನ ವಾರ ತಂಡಕ್ಕೆ ಹೊಸ ನಾಯಕನನ್ನು ನೇಮಕ ಮಾಡಲಾಗುವುದು ಎಂದು ಲಂಕಾ ಕ್ರಿಕೆಟ್ ಮಂಡಳಿ ತಿಳಿಸಿದೆ.

ಪೆರೇರಾ ಸ್ಥಾನವನ್ನು ಏಂಜೆಲೋ ಮ್ಯಾಥ್ಯೂಸ್ ಇಲ್ಲವೇ ದಿನೇಶ್ ಚಾಂಡಿಮಲ್ ತುಂಬಲಿದ್ದಾರೆ. ಇಬ್ಬರೂ ಸಹ ಈ ಹಿಂದೆ ಏಕದಿನ ತಂಡದ ನಾಯಕರಾಗಿದ್ದರು. ಭಾರತ ವಿರುದ್ಧ ಇತ್ತೀಚೆಗೆ ಮುಕ್ತಾಯಗೊಂಡ ಏಕದಿನ ಸರಣಿ ವೇಳೆ ಪೆರೇರಾ ಅವರನ್ನು ನಾಯಕರಾಗಿ ನೇಮಕ ಮಾಡಲಾಗಿತ್ತು.

ಈ ತಿಂಗಳಾಂತ್ಯದಲ್ಲಿ ಶ್ರೀಲಂಕಾ ತಂಡವು ಬಾಂಗ್ಲಾದೇಶ ಪ್ರವಾಸವನ್ನು ಕೈಗೊಳ್ಳುತ್ತಿದ್ದು, ಆ ವೇಳೆಗೆ ನೂತನ ನಾಯಕ ದ್ವೀಪ ರಾಷ್ಟ್ರದ ತಂಡವನ್ನು ಮುನ್ನಡೆಸಲಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Lionel Messi India visit: ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ನೀಡಿದ ಮೆಸ್ಸಿ!
ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?