
ಕೊಲಂಬೊ(ಅ.09): ಲಾಹೋರ್'ನಲ್ಲಿ ಟಿ20 ಸರಣಿ ಆಡಲು ಪಾಕಿಸ್ತಾನ ಪ್ರವಾಸ ಕೈಗೊಳ್ಳಬೇಕಿರುವ ಶ್ರೀಲಂಕಾ ಕ್ರಿಕೆಟ್ ತಂಡ, ಭದ್ರತೆ ಸಮಸ್ಯೆ ದೃಷ್ಟಿಯಿಂದ ಪ್ರವಾಸವನ್ನು ರದ್ದುಗೊಳಿಸಲು ಚಿಂತನೆ ನಡೆಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಶ್ರೀಲಂಕಾ ಕ್ರಿಕೆಟ್ ಸಂಸ್ಥೆ, ಪಾಕಿಸ್ತಾನದಲ್ಲಿ ಪರಿಸ್ಥಿತಿ ಹೇಗಿದೆ ಎನ್ನುವ ವಿವರ ಹಾಗೂ ಪ್ರವಾಸ ಕೈಗೊಳ್ಳುವುದು ಸೂಕ್ತವೇ ಎಂದು ಐಸಿಸಿಯನ್ನು ಕೇಳಿದೆ. ‘ಇದೇ ವಾರದಲ್ಲಿ ಐಸಿಸಿ ಅಧಿಕಾರಿಗಳನ್ನು ಭೇಟಿ ಮಾಡಿ, ಪಾಕಿಸ್ತಾನದಲ್ಲಿ ಪರಿಸ್ಥಿತಿ ಹೇಗಿದೆ ಎಂದು ವಿಚಾರಿಸಲಿದ್ದೇವೆ. ಅವರಿಂದ ಧನಾತ್ಮಕ ಪ್ರತಿಕ್ರಿಯೆ ದೊರೆತಲ್ಲಿ ಲಾಹೋರ್ಗೆ ತೆರಳಲು ಒಪ್ಪಿಗೆ ನೀಡಲಿದ್ದೇವೆ’ ಎಂದು ಲಂಕಾ ಕ್ರಿಕೆಟ್ ಸಂಸ್ಥೆ ಹೇಳಿದೆ.
2009ರಲ್ಲಿ ಶ್ರೀಲಂಕಾ ತಂಡವು ಪಾಕಿಸ್ತಾನ ಪ್ರವಾಸ ಕೈಗೊಂಡಿತ್ತು. ಆಗ ಲಾಹೋರ್'ನ ಗಡಾಫಿ ಮೈದಾನದ ಬಳಿ ಶ್ರೀಲಂಕಾ ಆಟಗಾರರು ಬಸ್'ನಲ್ಲಿ ಪ್ರಯಾಣಿಸುತ್ತಿದ್ದಾಗ 12 ಮಂದಿ ಉಗ್ರರು ಬಸ್ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ 6 ಅಧಿಕಾರಿಗಳು ಹಾಗೂ ಇಬ್ಬರು ನಾಗರಿಕರು ಮೃತ ಪಟ್ಟಿದ್ದರು. ಆ ಬಳಿಕ ಪಾಕಿಸ್ತಾನದಲ್ಲಿ ಆಡಲು ಬೇರೆ ತಂಡಗಳು ಹಿಂಜರಿಯುತ್ತಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.