
ಕೊಲೊಂಬೊ(ಜು.24): ವಿಶ್ವಕಪ್ ಟೂರ್ನಿಯಲ್ಲಿ ಶ್ರೀಲಂಕಾ ಹೀನಾಯ ಪ್ರದರ್ಶನ ಮಂಡಳಿ ಪಿತ್ತ ನೆತ್ತಿಗೇರಿಸಿದೆ. ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಟ್ರ್ಯಾಕ್ ರೆಕಾರ್ಡ್ ಹೊಂದಿರುವ ಶ್ರೀಲಂಕಾ, ಈ ಬಾರಿ ಕಳಪೆ ಪ್ರದರ್ಶನ ನೀಡಿದೆ. ಇದೀಗ ಲಂಕಾ ಕ್ರಿಕೆಟ್ ಮಂಡಳಿ, ತಂಡದ ಮೊದಲ ವಿಕೆಟ್ ಪತನಕ್ಕೆ ಮೂಹೂರ್ತ ಫಿಕ್ಸ್ ಮಾಡಿದೆ.
ಇದನ್ನೂ ಓದಿ: ಯಾರಾಗ್ತಾರೆ ಟೀಂ ಇಂಡಿಯಾ ಮುಂದಿನ ಕೋಚ್..?
ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿ ಬಳಿಕ ಶ್ರೀಲಂಕಾ ಮುಖ್ಯ ಕೋಚ್ ಚಂದಿಕ ಹತುರುಸಿಂಗ ರಾಜಿನಾಮೆ ನೀಡಲು ಕ್ರಿಕೆಟ್ ಮಂಡಳಿ ಸೂಚಿಸಿದೆ. ಮುಂದಿನ ವರ್ಷದ ಅಂತ್ಯಕ್ಕೆ ಲಂಕಾ ಕೋಚ್ ಅವದಿ ಮುಕ್ತಾಯಗೊಳ್ಳಲಿದೆ. ಆದರೆ ಕಳಪೆ ಪ್ರದರ್ಶನಕ್ಕೆ ಬೇಸತ್ತಿರುವ ಲಂಕಾ ಕ್ರಿಕೆಟ್ ಮಂಡಳಿ ಮುಖ್ಯ ಕೋಚ್ಗೆ ರಾಜಿನಾಮೆ ನೀಡಲು ತಾಕೀತು ಮಾಡಿದೆ.
ಇದನ್ನೂ ಓದಿ: ಕಟ್ಟಕಡೆಯ ಅಂತಾರಾಷ್ಟ್ರೀಯ ಪಂದ್ಯವನ್ನಾಡಲು ಸಜ್ಜಾದ ಮಾಲಿಂಗ
ಚಂದಿಕ ಹತುರುಸಿಂಗ 2017ರಲ್ಲಿ ಶ್ರೀಲಂಕಾ ತಂಡದ ಮುಖ್ಯ ಕೋಚ್ ಆಗಿ ಜವಾಬ್ದಾರಿ ವಹಿಸಿಕೊಂಡರು. ವಿಶ್ವಕಪ್ ಸೋಲಿನ ಬೆನ್ನಲ್ಲೇ ಶ್ರೀಲಂಕಾ ತಂಡದ ಮುಖ್ಯ ಕೋಚ್, ಸಹಾಯ ಸಿಬ್ಬಂದಿ ರಾಜಿನಾಮೆ ನೀಡುವಂತೆ ಲಂಕಾ ಕ್ರೀಡಾ ಸಚಿವರು ಆಗ್ರಹಿಸಿದ್ದರು. ಇದೀಗ ಮೊದಲ ವಿಕೆಟ್ ಪತನಕ್ಕೆ ದಿನಾಂಕ ನಿಗದಿಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.