
ಚೆನ್ನೈ[ಸೆ.22]: ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್ಸಿಎ) ಚುನಾವಣೆಗೆ ಸುಪ್ರೀಂ ಕೋರ್ಟ್ ಆದೇಶ ಅನುವು ಮಾಡಿದ್ದು, ಸಂಸ್ಥೆಯಲ್ಲಿ ಎನ್.ಶ್ರೀನಿವಾಸನ್ ಪ್ರಭಾವ ಮುಂದುವರಿಯುವ ನಿರೀಕ್ಷೆಯಿದೆ.
ಧೋನಿ IPL ಭವಿಷ್ಯ; CSK ಮಾಲೀಕ ಬಿಚ್ಚಿಟ್ಟ ಸೀಕ್ರೆಟ್!
ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಇಂಡಿಯಾ ಸಿಮೆಂಟ್ಸ್ ಮಾಲಿಕ ಎನ್.ಶ್ರೀನಿವಾಸ್ ಪುತ್ರಿ ಹಾಗೂ ಬೆಟ್ಟಿಂಗ್ ಪ್ರಕರಣದ ರೂವಾರಿ ಗುರುನಾಥನ್ ಮೇಯಪ್ಪನ್ ಪತ್ನಿ ರೂಪಾ ಗುರುನಾಥ್ ಅವರನ್ನೇ ನೂತನ ಅಧ್ಯಕ್ಷೆಯನ್ನಾಗಿ ಆಯ್ಕೆ ಮಾಡಬೇಕು ಎಂದು ಸಂಸ್ಥೆ ಪ್ರತಿನಿಧಿಗಳು ಬಯಸಿದ್ದಾರೆ. ಅವರಿಗೆ ಪ್ರತಿಸ್ಪರ್ಧಿಯೇ ಇಲ್ಲದ ಕಾರಣ, ಸೋಮವಾರ ಅವರನ್ನು ಅಧ್ಯಕ್ಷೆಯನ್ನಾಗಿ ಘೋಷಿಸುವ ಸಾಧ್ಯತೆ ಇದೆ.
CSK ಬಳಿಕ ತಮಿಳುನಾಡುಗೆ ಮತ್ತೊಂದು ಕಳಂಕ; ಲೀಗ್ನಲ್ಲಿ ಮ್ಯಾಚ್ ಫಿಕ್ಸಿಂಗ್?
ಒಂದೊಮ್ಮೆ ರೂಪ ಅಧ್ಯಕ್ಷ ಗಾದಿಗೇರಿದರೆ, ಬಿಸಿಸಿಐನಿಂದ ಮಾನ್ಯತೆ ಹೊಂದಿರುವ ರಾಜ್ಯ ಕ್ರಿಕೆಟ್ ಸಂಸ್ಥೆಯೊಂದರ ಮುಖ್ಯಸ್ಥರಾದ ಮೊದಲ ಮಹಿಳೆ ಎನ್ನುವ ಹಿರಿಮೆಗೆ ಪಾತ್ರರಾಗಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.