
ಲಂಡನ್(ಜು.11): ಟೀಂ ಇಂಡಿಯಾವನ್ನ ಮಣಿಸಲು ಇಂಗ್ಲೆಂಡ್ ಕ್ರಿಕೆಟಿಗರು ಇದೀಗ ಹೊಸ ಪ್ಲಾನ್ ರೂಪಿಸಿದ್ದಾರೆ. ಇಷ್ಟು ದಿನ ಐಪಿಎಲ್ ಟೂರ್ನಿಯಿಂದ ದೂರ ಸರಿದಿದ್ದ ಬಹುತೇಕ ಇಂಗ್ಲೆಂಡ್ ಕ್ರಿಕೆಟಿಗರು ಇದೀಗ ಐಪಿಎಲ್ ಟೂರ್ನಿ ಆಡಲು ಬಯಸಿದ್ದಾರೆ.
ಭಾರತದಲ್ಲಿ ಐಪಿಎಲ್ ಆಡೋ ಮೂಲಕ ಟೀಂ ಇಂಡಿಯಾ ಕ್ರಿಕೆಟಿಗರ ಪ್ಲಸ್ ಹಾಗೂ ವೀಕ್ನೆಸ್ ತಿಳಿದುಕೊಳ್ಳಲು ಇಂಗ್ಲೆಂಡ್ ಕ್ರಿಕೆಟಿಗರು ಸಜ್ಜಾಗಿದ್ದಾರೆ. ಹೀಗಾಗಿ ಇಷ್ಟು ದಿನ ಐಪಿಎಲ್ ಕ್ರಿಕೆಟ್ ಟೂರ್ನಿಯಿಂದ ಬಹುತೇಕ ಇಂಗ್ಲೆಂಡ್ ದೂರ ಉಳಿದಿದ್ದರು. ಇದೀಗ ಐಪಿಎಲ್ಗೆ ಮರಳಲು ಬಯಸಿದ್ದಾರೆ.
ಐಪಿಎಲ್ ಟೂರ್ನಿ ಆಡಿದರೆ, ನನ್ನ ಬೌಲಿಂಗ್ ಮತ್ತಷ್ಟು ಪರಿಣಾಮಕಾರಿಯಾಗಲಿದೆ. ಈ ಮೂಲಕ ಟೀಂ ಇಂಡಿಯಾ ವಿರುದ್ಧ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಲು ಸಾಧ್ಯ ಎಂದು ಇಂಗ್ಲೆಂಡ್ ಸ್ಪಿನ್ನರ್ ಆದಿಲ್ ರಶೀದ್ ಸ್ಕೈ ಸ್ಪೋರ್ಟ್ಸ್ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಟಿ20 ಸರಣಿಯಲ್ಲಿ ಭಾರತೀಯ ಬ್ಯಾಟ್ಸ್ಮನ್ಗಳು ನನ್ನ ಸ್ಪಿನ್ ದಾಳಿಗೆ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಭವಿಷ್ಯದಲ್ಲಿ ಐಪಿಎಲ್ ಟೂರ್ನಿ ಆಡೋ ಮೂಲಕ ಮತ್ತಷ್ಟು ಪರಿಣಾಮಕಾರಿ ಬೌಲಿಂಗ್ ದಾಳಿ ಮಾಡಲು ಬಯಸಿದ್ದೇನೆ ಎಂದು ರಶೀದ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.