
ಬೆಂಗಳೂರು(ಸೆ.14): ರಾಜ್ಯದ 30 ಕ್ರೀಡಾ ಶಾಲೆಗಳಿಗೆ ಶೀಘ್ರ ಕೋಚ್'ಗಳ ನೇಮಕ ಮಾಡಲು ಕ್ರಮ ಕೈಗೊಳ್ಳುವುದಾಗಿ ಯುವಜನ ಕ್ರೀಡಾ ಮತ್ತು ಬಂದರು ಸಚಿವ ಪ್ರಮೋದ್ ಮಧ್ವರಾಜ್ ಭರವಸೆ ನೀಡಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 30 ಕ್ರೀಡಾ ಶಾಲೆಗಳಲ್ಲಿ ಕೋಚ್ಗಳ ಕೊರತೆ ಇದೆ. ಅಗತ್ಯವಿರುವಷ್ಟು ಕೋಚ್'ಗಳ ನೇಮಕಕ್ಕೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ಇದರ ಜತೆಗೆ ಒಂದು ಪ್ರತಿಭಾನ್ವಿತ ಕ್ರೀಡಾಪಟುಗಳ ಶೋಧಕ್ಕಾಗಿ ಯೋಜನೆ ರೂಪಿಸಲಾಗುವುದು.
ನಾನು ಇಲಾಖೆ ಜವಾಬ್ದಾರಿ ಹೊತ್ತ ಬಳಿಕ ಇಲಾಖೆಗೆ ಸಿಗುವ ಅನುದಾನದ 265 ಕೋಟಿ ರುಪಾಯಿಗೆ ಏರಿಕೆಯಾಗಿದೆ ಎಂದು ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.