
ಮುಂಬೈ(ಮಾ.26): ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಚಂಡು ವಿರೂಪಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಲ್'ನ ರಾಜಸ್ಥಾನ ರಾಯಲ್ಸ್ ತಂಡದ ನಾಯಕತ್ವ ಸ್ಥಾನಕ್ಕೆ ಸ್ಟಿವ್ ಸ್ಮಿತ್ ರಾಜೀನಾಮೆ ನೀಡಿದ್ದಾರೆ. ಮೊದಲ ಕ್ರಮಾಂಕದ ಬ್ಯಾಟ್ಸ್'ಮೆನ್ ಅಜಿಂಕ್ಯ ರಹಾನೆ ಸ್ಮಿತ್ ಬದಲಾಗಿ ನೇಮಕ ಮಾಡಲಾಗಿದೆ.
ಚಂಡು ವಿರೂಪ ವಿಶ್ವ ಕ್ರಿಕೆಟ್'ನಲ್ಲಿ ಗಂಭೀರ ಪ್ರಕರಣವಾದ ಕಾರಣ ತಂಡದ ನಾಯಕನನ್ನು ಬದಲಾಯಿಸಲಾಗಿದೆ. ಅವರು ತಂಡವನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ' ಎಂದು ತಂಡದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 2008ರಲ್ಲಿ ರಾಜಸ್ಥಾನ ತಂಡ ಐಪಿಎಲ್'ನಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಏಪ್ರಿಲ್ 7ರಿಂದ ಐಪಿಎಲ್'ನ 11ನೇ ಆವೃತ್ತಿ ಆರಂಭವಾಗಲಿದೆ.
ಮ್ಯಾಚ್ ಫಿಕ್ಸಿಂಗ್'ಗೆ ಸಂಬಂಧಿಸಿದಂತೆ 2015ರಲ್ಲಿ ರಾಜಸ್ಥಾನ ತಂಡವನ್ನು ತಂಡದಿಂದ ನಿಷೇಧಿಸಲಾಗಿತ್ತು. ಚಂಡು ವಿರೂಪ ಆರೋಪದಲ್ಲಿ ಸ್ಮಿತ್ ಆವರು ಈಗಾಗಲೆ ಆಸ್ಟ್ರೇಲಿಯಾ ತಂಡಕ್ಕೆ ರಾಜೀನಾಮೆ ನೀಡಿದ್ದು, ಐಸಿಸಿ ಶೇ.100ರಷ್ಟು ಪಂದ್ಯ ಶುಲ್ಕದ ದಂಡ ಹಾಗೂ ಒಂದು ತಂಡದಿಂದ ನಿಷೇಧಿಸಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.