
ಮುಂಬೈ(ನ.03): ಟಿ20 ಮಾದರಿಯಿಂದ ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಎಂ.ಎಸ್ ಧೋನಿಯನ್ನ ಡ್ರಾಪ್ ಮಾಡಿರೋದು ಅಭಿಮಾನಿಗಳು ಮಾತ್ರವಲ್ಲ, ದಿಗ್ಗಜ ಕ್ರಿಕೆಟಿಗರ ಅಸಮಧಾನಕ್ಕೂ ಕಾರಣವಾಗಿದೆ. ಚುಟುಕು ಮಾದರಿಯಿಂದ ಹೊರಗುಳಿದಿರುವ ಧೋನಿಗೆ, ಮಾಜಿ ನಾಯಕ, ದಿಗ್ಗಜ ಕ್ರಿಕೆಟಿಗರ ಸುನಿಲ್ ಗವಾಸ್ಕರ್ ಸಲಹೆ ನೀಡಿದ್ದಾರೆ.
ಟಿ20 ಸರಣಿಯಿಂದ ಧೋನಿಯನ್ನ ಹೊರಗಿಡುತ್ತಿದ್ದಂತೆ, ಪರ ವಿರೋಧಗಳು ವ್ಯಕ್ತವಾಗಿತ್ತು. ಇನ್ನು ಗವಾಸ್ಕರ್ ಧೋನಿ ಅವಶ್ಯಕತೆ ತಂಡಕ್ಕಿದೆ ಎಂದು ಆಯ್ಕೆ ಸಮಿತಿಗೆ ಪರೋಕ್ಷವಾಗಿ ಸೂಚನೆ ನೀಡಿದ್ದರು. ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿ ಬಳಿಕ ವಿಶ್ರಾಂತಿಗೆ ಜಾರಿರುವ ಧೋನಿ, ಹೆಚ್ಚು ಕ್ರಿಕೆಟ್ ಆಡಲು ಸೂಚಿಸಿದ್ದಾರೆ.
ವಿಶ್ರಾಂತಿಯಲ್ಲಿರುವ ಧೋನಿ, ಜಾರ್ಖಂಡ್ ಪರ ಕಣಕ್ಕಿಳಿಯಬೇಕು. ವಿಶ್ವಕಪ್ ಟೂರ್ನಿ ದೃಷ್ಟಿಯಿಂದ ಎಂ.ಎಸ್.ಧೋನಿ ದೇಸಿ ಟೂರ್ನಿಗಳಲ್ಲಿ ಪಾಲ್ಗೊಳ್ಳಬೇಕು. ಈ ಮೂಲಕ ವಿಶ್ವಕಪ್ ಟೂರ್ನಿಗೆ ತಯಾರಾಗಬೇಕು ಎಂದು ಗವಾಸ್ಕರ್ ಸಲಹೆ ನೀಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.