
ಲೀಡ್ಸ್(ಜು.17): ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ನಾಯಕ ವಿರಾಟ್ ಕೊಹ್ಲಿ ಸಿಡಿಸಿದ ಅರ್ಧಶತಕ ಹೊರತು ಪಡಿಸಿದರೆ, ಉಳಿದ ಬ್ಯಾಟ್ಸ್ಮನ್ಗಳಿಂದ ರನ್ ಹರಿದು ಬರಲಿಲ್ಲ.
ಲೀಡ್ಸ್ ಪಂದ್ಯದಲ್ಲಿ ಟೀಂ ಇಂಡಿಯಾ ಅಲ್ಪಮೊತ್ತಕ್ಕೆ ಕುಸಿಯೋ ಭೀತಿ ಎದುರಾಗಿದೆ. ಈ ನಡುವೆ ಟೀಂ ಇಂಡಿಯಾ ಗೆಲುವಿಗೆ ಎಷ್ಟು ರನ್ ಸೂಕ್ತ ಅನ್ನೋ ಚರ್ಚೆ ಶುರುವಾಗಿದೆ. ಟೀಂ ಇಂಡಿಯಾ ಮಾಜಿ ನಾಯಕ ಸುನಿಲ್ ಗವಾಸ್ಕರ್ ಪ್ರಕಾರ ಗೆಲುವಿಗೆ 260 ರಿಂದ 280 ರನ್ಗಳಿಸಿದರೆ ಭಾರತದ ಗೆಲುವು ಸುಲಭವಾಗಲಿದೆ ಎಂದಿದ್ದಾರೆ.
ಟಾಸ್ ಸೋತು ಬ್ಯಾಟಿಂಗ್ ಇಳಿದಿರುವ ಟೀಂ ಇಂಡಿಯಾ ಈಗಾಗಲೇ 6 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದೆ. ರೋಹಿತ್ ಶರ್ಮಾ 2, ಶಿಖರ್ ಧವನ್ 44, ದಿನೇಶ್ ಕಾರ್ತಿಕ್ 21, ವಿರಾಟ್ ಕೊಹ್ಲಿ 71, ಸರೇಶ್ ರೈನಾ 1 ಹಾಗೂ ಹಾರ್ದಿಕ್ ಪಾಂಡ್ಯ 21 ರನ್ ಸಿಡಿಸಿ ಪೆವಿಲಿಯನ್ ಸೇರಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.