
ಸೋನೆಪತ್(ಜು.25): ಪ್ರೊ ಕಬಡ್ಡಿ ತಂಡಕ್ಕೆ ಹೊಸದಾಗಿ ಸೇರ್ಪಡೆಗೊಂಡಿರುವ ಹರ್ಯಾಣ ಸ್ಟೀಲರ್ಸ್ ತಂಡದ ನಾಯಕರಾಗಿ ಸ್ಟಾರ್ ಡಿಫೆಂಡರ್ ಸುರೇಂದರ್ ನಾಡಾ ನೇಮಕಗೊಂಡಿದ್ದಾರೆ. ಉಪನಾಯಕರಾಗಿ ವಜೀರ್ ಸಿಂಗ್ ಉಪನಾಯಕರಾಗಿ ಆಯ್ಕೆ ಮಾಡಲಾಗಿದೆ.
ಮೂರು ವಾರಗಳ ಕಾಲ ಬಳ್ಳಾರಿಯಲ್ಲಿ ಅಭ್ಯಾಸ ನಡೆಸಿದ ತಂಡ ಪಂದ್ಯಾವಳಿಗೆ ಸಕಲ ರೀತಿಯಲ್ಲೂ ಸಜ್ಜಾಗಿದೆ ಎಂದು ತಂಡದ ಮುಖ್ಯ ಕೋಚ್ ರಣ್'ಬೀರ್ ಸಿಂಗ್ ತಿಳಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ ಸುರೇಂದರ್ ನಾಡಾ ಬೆಂಗಳೂರು ಬುಲ್ಸ್ ತಂಡದ ನಾಯಕರಾಗಿದ್ದರು.
ಇದೇ ವೇಳೆ ಡೆಲ್ಲಿ ದಬಾಂಗ್ ತಂಡ ಮಿರಾಜ್ ಶೇಖ್ ಅವರನ್ನು ನಾಯಕರನ್ನಾಗಿ ನೇಮಕ ಮಾಡಿದೆ.
5ನೇ ಆವೃತ್ತಿಯ ಪ್ರೊ ಕಬಡ್ಡಿ ಟೂರ್ನಿಯು ಜುಲೈ 18ರಂದು ಹೈದರಾಬಾದ್'ನಲ್ಲಿ ಆರಂಭವಾಗಲಿದ್ದು, ಜುಲೈ 30ರಂದು ಹರ್ಯಾಣ ತಂಡವು ಯು ಮುಂಬಾ ಎದುರು ಮೊದಲ ಪಂದ್ಯವನ್ನಾಡಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.