
ಬೆಂಗಳೂರು(ಆ.13): ಶ್ರೀಲಂಕಾ ವಿರುದ್ಧದ ಸೀಮಿತ ಓವರ್'ಗಳ ಸರಣಿಯಲ್ಲಿ ಭಾರತ ತಂಡ ಕೂಡಿಕೊಳ್ಳುವ ವಿಶ್ವಾಸವಿಸೆ ಎಂದು ಸುರೇಶ್ ರೈನಾ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಶ್ರೀಲಂಕಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ಬಿಸಿಸಿಐ ಇಂದು ಭಾರತ ತಂಡವನ್ನು ಆಯ್ಕೆ ಮಾಡಲಿದ್ದು, ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸವಿದೆ ಎಂದು ರೈನಾ ಹೇಳಿದ್ದಾರೆ.
ನಾನು ಆಡುವುದಿಲ್ಲ ಎಂದು ಹೇಲಿದ್ದು ಯಾರು?, ಆಡಲು ಸಿದ್ದವಿದ್ದೇನೆ' ಎಂದು ರೈನಾ ತಿಳಿಸಿದ್ದಾರೆ. 2015ರ ಬಳಿಕ ಸುರೇಶ್ ರೈನಾ ಏಕದಿನ ತಂಡದಲ್ಲಿ ಟೀಂ ಇಂಡಿಯಾ ಪರ ಕಾಣಿಸಿಕೊಂಡಿಲ್ಲ.
ಎರಡು ತಿಂಗಳು ಆ್ಯಮ್'ಸ್ಟರ್ ಡ್ಯಾಮ್'ನಲ್ಲಿ ತರಬೇತಿ ಪಡೆದು, ಸದ್ಯ ಬೆಂಗಳೂರಿನ ಎನ್'ಸಿಎನಲ್ಲಿ ಧೋನಿ ಅವರೊಂದಿಗೆ ರೈನಾ ಅಭ್ಯಾಸ ನಡೆಸುತ್ತಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.