
ಮುಂಬೈ(ಅ.24): ವೈರಸ್ ಜ್ವರದಿಂದ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಸುರೇಶ್ ರೈನಾ ಭಾರತ-ನ್ಯೂಜಿಲ್ಯಾಂಡ್ ನಡುವಿನ ಸರಣಿಯ ಉಳಿದ ಎರಡು ಏಕದಿನ ಪಂದ್ಯಗಳಿಗೆ ತಂಡದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದಾರೆ.
ಇಂದು ನಡೆದ ಬಿಸಿಸಿಐ ಸಭೆಯಲ್ಲಿ ಈ ಹಿಂದಿನ ತಂಡವನ್ನೇ ಉಳಿಸಿಕೊಳ್ಳಲು ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ.
ಭಾರತ ಈಗಾಗಲೇ ಐದು ಪಂದ್ಯಗಳ ಏಕದಿನ ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನೆಡೆ ಕಾಯ್ದುಕೊಂಡಿದೆ. ಸುರೇಶ್ ರೈನಾ ಇನ್ನೂ ಪೂರ್ಣ ಪ್ರಮಾಣದಲ್ಲಿ ಫಿಟ್'ನೆಸ್ ಹೊಂದಿಲ್ಲ. ಹೀಗಾಗಿ ಆಯ್ಕೆ ಸಮಿತಿಯು ಮುಂದಿನ ಎರಡು ಪಂದ್ಯಗಳಿಗೆ 14 ಸದಸ್ಯರ ತಂಡವನ್ನೆ ಉಳಿಸಿಕೊಳ್ಳಲಾಗಿದೆ ಎಂದು ತಿಳಿಸಲಾಗಿದೆ.
ಭಾರತ ತಂಡ ಇಂತಿದೆ:
ಮಹೇಂದ್ರ ಸಿಂಗ್ ಧೋನಿ(ನಾಯಕ), ರೋಹಿತ್ ಶರ್ಮಾ, ಅಜಿಂಕ್ಯಾ ರಹಾನೆ, ವಿರಾಟ್ ಕೊಹ್ಲಿ, ಮನೀಶ್ ಪಾಂಡೆ, ಹಾರ್ಧಿಕ್ ಪಾಂಡ್ಯ, ಅಕ್ಷರ್ ಪಟೇಲ್, ಜಯಂತ್ ಯಾದವ್, ಅಮಿತ್ ಮಿಶ್ರಾ, ಜಸ್ಪ್ರೀತ್ ಬುಮ್ರಾ, ಧವಳ್ ಕುಲ್ಕರ್ಣಿ, ಉಮೇಶ್ ಯಾದವ್, ಮನ್ದೀಪ್ ಸಿಂಗ್, ಕೇದಾರ್ ಜಾಧವ್
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.