ರಶೀದ್ ಖಾನ್’ಗೆ ಪೌರತ್ವ ನೀಡಿ: ಸುಷ್ಮಾಗೆ ದುಂಬಾಲು ಬಿದ್ದ ಭಾರತೀಯರು..!

Published : May 26, 2018, 02:03 PM IST
ರಶೀದ್ ಖಾನ್’ಗೆ ಪೌರತ್ವ ನೀಡಿ: ಸುಷ್ಮಾಗೆ ದುಂಬಾಲು ಬಿದ್ದ ಭಾರತೀಯರು..!

ಸಾರಾಂಶ

ರಶೀದ್ ಖಾನ್ ಅದ್ಭುತ ಪ್ರದರ್ಶನವನ್ನು ಕೊಂಡಾಡಿರುವ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಆಫ್ಘಾನ್ ಕ್ರಿಕೆಟಿಗನಿಗೆ ಭಾರತದ ಪೌರತ್ವ ನೀಡಿ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್’ಗೆ ದುಂಬಾಲು ಬಿದ್ದಿದ್ದಾರೆ. 

ಬೆಂಗಳೂರು[ಮೇ.26]: ರಶೀದ್ ಖಾನ್ ಹಾಲಿ ಐಪಿಎಲ್’ನಲ್ಲಿ ಎದುರಾಳಿ ಬ್ಯಾಟ್ಸ್’ಮನ್’ಗಳ ಎದೆಯಲ್ಲಿ ನಡುಕ ಹುಟ್ಟಿಸಿದ ಬೌಲರ್. ಯುದ್ದಪೀಡಿತ ಆಫ್ಘಾನಿಸ್ತಾನದ ಸ್ಪಿನ್ ಪ್ರತಿಭೆ ರಶೀದ್ ಖಾನ್ ತಮ್ಮ ಅಧ್ಬುತ ಬೌಲಿಂಗ್ ಪ್ರದರ್ಶನದ ಮೂಲಕ ಭಾರತೀಯರ ಮನ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
ಹಾಲಿ ಸನ್’ರೈಸರ್ಸ್ ಹೈದರಾಬಾದ್ ತಂಡದ ಪ್ರಮುಖ ಬೌಲರ್ ಆಗಿ ಗುರುತಿಸಿಕೊಂಡಿರುವ ರಶೀದ್ ಖಾನ್, ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಕೋಲ್ಕತ ನೈಟ್’ರೈಡರ್ಸ್ ವಿರುದ್ಧ ಬ್ಯಾಟಿಂಗ್ ಹಾಗೂ ಬೌಲಿಂಗ್’ನಲ್ಲಿ ಗಮನಾರ್ಹ ಪ್ರದರ್ಶನ ತೋರುವುದರೊಂದಿಗೆ ತಂಡವನ್ನು ಫೈನಲ್’ಗೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದರು.
ರಶೀದ್ ಖಾನ್ ಅದ್ಭುತ ಪ್ರದರ್ಶನವನ್ನು ಕೊಂಡಾಡಿರುವ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಆಫ್ಘಾನ್ ಕ್ರಿಕೆಟಿಗನಿಗೆ ಭಾರತದ ಪೌರತ್ವ ನೀಡಿ ಎಂದು ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್’ಗೆ ದುಂಬಾಲು ಬಿದ್ದಿದ್ದಾರೆ. 

ಟ್ವಿಟರಿಗರ ಕೋರಿಕೆಗೆ ಪ್ರತಿಕ್ರಿಯಿಸಿರುವ ಸುಷ್ಮಾ, ನಾನು ಈ ಎಲ್ಲಾ ಟ್ವೀಟ್’ಗಳನ್ನು ನೋಡುತ್ತಿದ್ದೇನೆ. ಪೌರತ್ವಕ್ಕೆ ಸಂಬಂಧಿಸಿದ ವಿಚಾರಗಳು ಗೃಹ ಸಚಿವಾಲಯ ನಿಭಾಯಿಸುತ್ತದೆ ಎಂದು ಟ್ವೀಟ್ ಮಾಡಿದ್ದರು. ಇದಾದ ಬಳಿಕ ಕೆಲಹೊತ್ತಿನಲ್ಲೇ ಆ ಟ್ವೀಟ್ ಅಳಿಸಿಹಾಕಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೇವಲ ₹10 ಲಕ್ಷ ಕೊಡಿ, ಮೆಸ್ಸಿ ಜತೆಗೆ ಒಂದು ಫೋಟೋ ತೆಗೆಸಿಕೊಳ್ಳಿ! ಕೇವಲ 100 ಮಂದಿಗಷ್ಟೇ ಈ ಚಾನ್ಸ್!
ಫುಟ್ಬಾಲ್ ಲೆಜೆಂಡ್ ಲಿಯೋನೆಲ್ ಮೆಸ್ಸಿ ಸ್ವಾಗತಕ್ಕೆ ಕೋಲ್ಕತಾ ಸಜ್ಜು! ಇಲ್ಲಿದೆ ನೋಡಿ ಕಂಪ್ಲೀಟ್ ಡೀಟೈಲ್ಸ್