ಮಗನ ಚಿನ್ನದ ಪದಕ ನೋಡುವ ಮುನ್ನ ಕಣ್ಮುಚ್ಚಿದ ತಜೀಂದರ್ ತಂದೆ

Published : Sep 04, 2018, 02:24 PM ISTUpdated : Sep 09, 2018, 09:35 PM IST
ಮಗನ ಚಿನ್ನದ ಪದಕ ನೋಡುವ ಮುನ್ನ ಕಣ್ಮುಚ್ಚಿದ ತಜೀಂದರ್ ತಂದೆ

ಸಾರಾಂಶ

23 ವರ್ಷದ ಪಂಜಾಬ್ ಮೂಲದ ತಜೀಂದರ್ ಸಿಂಗ್ 20.75 ಮೀಟರ್ ದೂರ ಶಾಟ್’ಪುಟ್ ಎಸೆಯುವುದರೊಂದಿಗೆ ಏಷ್ಯನ್ ಗೇಮ್ಸ್’ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದರು. ಪ್ರಶಸ್ತಿ ಗೆದ್ದ ಬೆನ್ನಲ್ಲೇ ಚಿನ್ನದ ಪದಕವನ್ನು ಕಳೆದೆರಡು ವರ್ಷಗಳಿಂದ ಕ್ಯಾನ್ಸರ್’ನೊಂದಿಗೆ ಹೋರಾಡುತ್ತಿರುವ ತನ್ನ ತಂದೆಗೆ ಅರ್ಪಿಸುವುದಾಗಿ ತಜೀಂದರ್ ಹೇಳಿದ್ದರು.

ನವದೆಹಲಿ[ಸೆ.04]: ಏಷ್ಯನ್ ಗೇಮ್ಸ್’ನ ಗುಂಡು ಎಸೆದಲ್ಲಿ ರಾಷ್ಟ್ರೀಯ ದಾಖಲೆಯೊಂದಿಗೆ ಚಿನ್ನ ಗೆದ್ದಿದ್ದ ತಜೀಂದರ್ ಸಿಂಗ್ ಅವರ ತಂದೆ ಕರಮ್ ಸಿಂಗ್ ಮಗನ ಚಿನ್ನದ ಪದಕ ಕಣ್ತುಂಬಿಕೊಳ್ಳುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ.
23 ವರ್ಷದ ಪಂಜಾಬ್ ಮೂಲದ ತಜೀಂದರ್ ಸಿಂಗ್ 20.75 ಮೀಟರ್ ದೂರ ಶಾಟ್’ಪುಟ್ ಎಸೆಯುವುದರೊಂದಿಗೆ ಏಷ್ಯನ್ ಗೇಮ್ಸ್’ನಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿದ್ದರು. ಪ್ರಶಸ್ತಿ ಗೆದ್ದ ಬೆನ್ನಲ್ಲೇ ಚಿನ್ನದ ಪದಕವನ್ನು ಕಳೆದೆರಡು ವರ್ಷಗಳಿಂದ ಕ್ಯಾನ್ಸರ್’ನೊಂದಿಗೆ ಹೋರಾಡುತ್ತಿರುವ ತನ್ನ ತಂದೆಗೆ ಅರ್ಪಿಸುವುದಾಗಿ ತಜೀಂದರ್ ಹೇಳಿದ್ದರು. ದೇಶಕ್ಕಾಗಿ ಚಿನ್ನ ಗೆಲ್ಲಬೇಕು ಎನ್ನುವ ತಂದೆಯ ಆಸೆಯನ್ನು ಈಡೇರಿಸಿದ್ದ ತಜೀಂದರ್ ಆದಷ್ಟು ಬೇಗ ತಂದೆಯನ್ನು ಭೇಟಿಯಾಗುವ ಆಸೆಯಿಂದ ತವರಿಗೆ ಮರಳಿದ್ದರು.

ಡೆಲ್ಲಿ ಏರ್’ಪೋರ್ಟ್’ಗೆ ಕಾಲಿಡುತ್ತಿದ್ದಂತೆ ತಜೀಂದರ್’ಗೆ ಬ್ಯಾಡ್ ನ್ಯೂಸ್ ಎದುರಾಗಿದೆ. ಭಾರತದ ಅಥ್ಲೇಟಿಕ್ಸ್ ಫೆಡರೇಶನ್ ತಜೀಂದರ್ ತಂದೆಯ ಸಾವಿಗೆ ಸಂತಾಪ ಸೂಚಿಸಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮೇಲ್ಮನವಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಡಿ.7ಕ್ಕೆ ಕರ್ನಾಟಕ ಕ್ರಿಕೆಚ್ ಸಂಸ್ಥೆ ಚುನಾವಣೆ
ಕಾಂಗರೂ ನಾಡಲ್ಲಿ ಶತಕದ ಬರ ನೀಗಿಸಿಕೊಂಡ ಜೋ ರೂಟ್! ಕೊನೆಗೂ ತಪ್ಪಿದ ಹೇಡನ್ 'ಬೆತ್ತಲೆ ಸೇವೆ'!