
ವಿಶಾಖಪಟ್ಟಣಂ(ಮಾ.29): ದಿನೇಶ್ ಕಾರ್ತಿಕ್ ಬಾರಿಸಿದ ಭರ್ಜರಿ ಶತಕದ ನೆರವಿನಿಂದ ವಿಜಯ್ ಹಜಾರೆ ಟ್ರೋಫಿ ಚಾಂಪಿಯನ್ ತಮಿಳುನಾಡು ದೇವ್'ಧರ್ ಟ್ರೋಫಿಯನ್ನು ಎತ್ತಿಹಿಡಿಯುವಲ್ಲಿ ಯಶಸ್ವಿಯಾಗಿದೆ.
ಪ್ರಶಸ್ತಿ ಸುತ್ತಿನಲ್ಲಿ ಇಂಡಿಯಾ ಬಿ ವಿರುದ್ಧ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ತಮಿಳುನಾಡು ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಶತಕ(126) ಮತ್ತು ಜಗದೀಶನ್(55) ಅರ್ಧಶತಕದ ನೆರವಿನಿಂದ 303 ರನ್ ಕಲೆಹಾಕಿತು. ಇಂಡಿಯಾ ಬಿ ಪರ ದವಳ್ ಕುಲಕರ್ಣಿ 5 ವಿಕೆಟ್ ಪಡೆದು ಮಿಂಚಿದರು.
ಬೃಹತ್ ಗುರಿ ಬೆನ್ನತ್ತಿದ ಇಂಡಿಯಾ ಬಿ ತಂಡ 261 ರನ್'ಗಳಿಗೆ ಸರ್ವಪತನವಾಗುವುದರೊಂದಿಗೆ ಪಾರ್ಥೀವ್ ಪಟೇಲ್ ಪಡೆ 41 ರನ್'ಗಳ ಅಂತರದಲ್ಲಿ ಸೋಲುಂಡಿತು. ತಮಿಳುನಾಡು ಪರ ಶಿಸ್ತುಬದ್ಧ ದಾಳಿ ನಡೆಸಿದ ಸ್ಪಿನ್ ಬೌಲರ್'ಗಳು ಇಂಡಿಯಾ ಬಿ ತಂಡದ ಬ್ಯಾಟ್ಸ್'ಮನ್'ಗಳನ್ನು ಮೈದಾನದಲ್ಲಿ ಭದ್ರವಾಗಿ ನೆಲೆಯೂರಲು ಅವಕಾಶವನ್ನೇ ಮಾಡಿಕೊಡಲಿಲ್ಲ.
ಭರ್ಜರಿ ಶತಕ ಸಿಡಿಸಿದ ದಿನೇಶ್ ಕಾರ್ತೀಕ್ ಪಂದ್ಯ ಪುರುಷೋತ್ತಮ ಪ್ರಶಸ್ತಿಗೆ ಭಾಜನರಾದರು.
ಈ ಜಯದೊಂದಿಗೆ ತಮಿಳುನಾಡು ತಂಡ ಎರಡನೇ ಬಾರಿಗೆ ದೇವ್'ಧರ್ ಟ್ರೋಫಿ ಜಯಿಸಿದಂತಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.