
ಮೊಹಾಲಿ(ನ.26): ಟೀಂ ಇಂಡಿಯಾ ಆಲ್ರೌಂಡರ್ ಯುವರಾಜ್ ಸಿಂಗ್ ಈ ಬಾರಿಯ ಮೊದಲ ರಣಜಿ ಪಂದ್ಯಕ್ಕೆ ರೆಡಿಯಾಗಿದ್ದಾರೆ. ಪಂಜಾಬ್ ರಣಜಿ ತಂಡದಿಂದ ಹೊರಗುಳಿದಿದ್ದ ಯುವಿ ಮತ್ತೆ ತಂಡ ಸೇರಿಕೊಂಡಿದ್ದಾರೆ.
ಡಿಸೆಂಬರ್ 6 ರಿಂದ 9 ರ ವರೆಗಿನ ಹಿಮಾಚಲ್ ವಿರುದ್ಧದ ಪಂದ್ಯ ಹಾಗೂ ಡಿಸೆಂಬರ್ 14 ರಿಂದ 17 ವರೆಗಿನ ತಮಿಳುನಾಡು ಪಂದ್ಯಗಳಲ್ಲಿ ಯುವರಾಜ್ ಸಿಂಗ್ ಕಣಕ್ಕಿಳಿಯಲಿದ್ದಾರೆ. ಈ ಮೂಲಕ ಪ್ರಸಕ್ತ ವರ್ಷದ ಮೊದಲ ರಣಜಿ ಪಂದ್ಯ ಆಡಲಿದ್ದಾರೆ.
ಪಂಜಾಬ್ ತಂಡದ ಯುವ ಬ್ಯಾಟ್ಸ್ಮನ್ ಶುಭ್ನಮ್ ಗಿಲ್ , ಭಾರತ ಎ ತಂಡ ಸೇರಿಕೊಂಡಿದ್ದಾರೆ. ಭಾರತ ಎ ತಂಡ ನ್ಯೂಜಿಲೆಂಡ್ ಎ ತಂಡದ ವಿರುದ್ಧ ಪಂದ್ಯ ಆಡಿಲಿದೆ. ಹೀಗಾಗಿ ಶುಭ್ನಮ್ ಸ್ಥಾನಕ್ಕೆ ಯುವರಾಜ್ ಸಿಂಗ್ ಅವರನ್ನ ಆಯ್ಕೆ ಮಾಡಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.