
ಮುಂಬೈ(ಅ.01): ವಿರಾಟ್ ಕೊಹ್ಲಿ ನಾಯಕತ್ವದ ಟೀಂ ಇಂಡಿಯಾ ಸದ್ಯ ವೆಸ್ಟ್ಇಂಡೀಸ್ ವಿರುದ್ಧದ ಸರಣಿಗೆ ತಯಾರಿ ನಡೆಸುತ್ತಿದೆ. ಅಕ್ಟೋಬರ್ 4 ರಿಂದ ವಿಂಡೀಸ್ ವಿರುದ್ಧದ 2 ಟೆಸ್ಟ್ ಪಂದ್ಯಗಳ ಸರಣಿ ಆಯೋಜನೆಗೊಳ್ಳಲಿದೆ. ಆದರೆ ಇತ್ತೀಚೆಗೆ ಮುಕ್ತಾಯವಾದ ಏಷ್ಯಾಕಪ್ ಟೂರ್ನಿಯಿಂದ ನಾಯಕ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿತ್ತು.
ಪ್ರತಿಷ್ಠಿತ ಟೂರ್ನಿಯಿಂದ ಕೊಹ್ಲಿಗೆ ವಿಶ್ರಾಂತಿ ನೀಡಿದ್ದು ಯಾಕೆ ಅನ್ನೋ ಚರ್ಚೆಗಳು ನಡೆದಿದೆ. ಇದೀಗ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ, ವಿಶ್ರಾಂತಿ ಹಿಂದಿನ ಕಾರಣಗಳನ್ನ ಬಿಚ್ಚಿಟ್ಟಿದ್ದಾರೆ. ಈ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಸುದೀರ್ಘ ಇಂಗ್ಲೆಂಡ್ ಪ್ರವಾಸದಲ್ಲಿ ವಿರಾಟ್ ಕೊಹ್ಲಿ ಎಲ್ಲಾ ಪಂದ್ಯಗಳನ್ನ ಆಡಿದ್ದಾರೆ. ಸತತ ಕ್ರಿಕೆಟ್ನಿಂದ ವಿರಾಟ್ ಬಳಲಿದ್ದರು. ಇಷ್ಟೇ ಅಲ್ಲ ನಾಯಕನ ಜವಾಬ್ದಾರಿ ನಿರ್ವಹಿಸೋ ಕೊಹ್ಲಿಗೆ ಮಾನಸಿಕವಾಗಿಯೂ ವಿಶ್ರಾಂತಿ ಅವಶ್ಯಕತೆ ಇತ್ತು. ಆಟಗಾರನ ಹಿತದೃಷ್ಟಿಯಿಂದ ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿತ್ತು ಎಂದು ಶಾಸ್ತ್ರಿ ಹೇಳಿದ್ದಾರೆ.
ಏಷ್ಯಾಕಪ್ ವಿಶ್ರಾಂತಿಯಿಂದ ಕೊಹ್ಲಿಗೆ ಉಪಯುಕ್ತ ಸಮಯ ಸಿಕ್ಕಿದೆ. ಇಷ್ಟೇ ಅಲ್ಲ ವೆಸ್ಟ್ಇಂಡೀಸ್ ಸರಣಿಗೆ ಕೊಹ್ಲಿ ಫ್ರೆಶ್ ಆಗಿದ್ದಾರೆ ಎಂದು ಶಾಸ್ತ್ರಿ ಹೇಳಿದ್ದಾರೆ. ವಿಶ್ರಾಂತಿ ಕೇವಲ ಕೊಹ್ಲಿಗೆ ಮಾತ್ರವಲ್ಲ, ವೇಗಿಗಳಿಗೂ ಅವಶ್ಯಕತೆ ಇದೆ ಎಂದು ಶಾಸ್ತ್ರಿ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.