
ನವದೆಹಲಿ[ಸೆ.11]: ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಮಧ್ಯೆ ಮನಸ್ತಾಪದ ಸುದ್ದಿಯನ್ನು ಕೋಚ್ ರವಿಶಾಸ್ತ್ರಿ ಮತ್ತೊಮ್ಮೆ ತಳ್ಳಿಹಾಕಿದ್ದಾರೆ.
ರಾಹುಲ್ ಬದಲು ರೋಹಿತ್ ಟೆಸ್ಟ್ ಓಪನರ್?
‘ಅವರಿಬ್ಬರ ನಡುವೆ ಮನಸ್ತಾಪವಿದ್ದರೆ ವಿಶ್ವಕಪ್ನಲ್ಲಿ ರೋಹಿತ್ ಶರ್ಮಾ 5 ಶತಕ ಹೊಡೆಯಲು ಸಾಧ್ಯವಿತ್ತೇ? ಅವರಿಬ್ಬರು ಜೊತೆಯಾಟವಾಡಲು ಹೇಗೆ ಸಾಧ್ಯವಾಯಿತು? ಯಾವುದೇ ಮನಸ್ತಾಪಗಳಿಲ್ಲ’ ಎಂದು ರವಿಶಾಸ್ತ್ರಿ ಹೇಳಿದ್ದಾರೆ. ‘ಒಂದು ತಂಡ ಎಂದ ಮೇಲೆ ಭಿನ್ನಾಭಿಪ್ರಾಯಗಳು ಇರುವುದು ಸಾಮಾನ್ಯ. ಅದನ್ನು ಮನಸ್ತಾಪ ಎಂದು ಕರೆಯಲು ಸಾಧ್ಯವಿಲ್ಲ. ಬೇರೆ ಬೇರೆ ಅಭಿಪ್ರಾಯಗಳು ವ್ಯಕ್ತವಾದಾಗ ಮಾತ್ರ ತಂಡಕ್ಕೆ ಯಾವುದು ಒಳ್ಳೆಯದು, ಯಾವ ನಿರ್ಧಾರ ಕೈಹಿಡಿಯುತ್ತದೆ ಎನ್ನುವುದನ್ನು ತಿಳಿದುಕೊಳ್ಳಲು ಸಾಧ್ಯ’ ಎಂದು ಶಾಸ್ತ್ರಿ ಹೇಳಿದ್ದಾರೆ.
ಟ್ರೋಲಿಗರಿಗೆ ತಿರುಗೇಟು ನೀಡಲು ಹೋದ ಶಾಸ್ತ್ರಿಗೆ ಮತ್ತೆ ಕ್ಲಾಸ್!
ಐಸಿಸಿ ಏಕದಿನ ವಿಶ್ವಕಪ್ ಮುಕ್ತಾಯವಾದ ದಿನದಿಂದಲೂ ರೋಹಿತ್-ಕೊಹ್ಲಿ ನಡುವೆ ಮನಸ್ತಾಪವಿದೆ ಎನ್ನುವ ಮಾತುಗಳು ಆಗಾಗ ಕೇಳಿಬರುತ್ತಲೇ ಇದೆ. ಇದಕ್ಕೆ ತೆರೆ ಎಳೆಯುವ ಪ್ರಯತ್ನವೂ ನಡೆಯುತ್ತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.