ವೈಜಾಗ್ ಟೆಸ್ಟ್ ಆಡುತ್ತಿರುವ ರಹಾನೆಗಿದು ಗುಡ್ ನ್ಯೂಸ್..!

Published : Oct 05, 2019, 01:29 PM IST
ವೈಜಾಗ್ ಟೆಸ್ಟ್ ಆಡುತ್ತಿರುವ ರಹಾನೆಗಿದು ಗುಡ್ ನ್ಯೂಸ್..!

ಸಾರಾಂಶ

ವೈಜಾಗ್ ಟೆಸ್ಟ್ ಪಂದ್ಯವನ್ನಾಡುತ್ತಿರುವ ಟೀಂ ಇಂಡಿಯಾ ಟೆಸ್ಟ್ ಉಪನಾಯಕ ಅಜಿಂಕ್ಯ ರಹಾನೆ ಪಾಲಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ಡ್ಯಾಡಿ ಕ್ಲಬ್‌ಗೆ ಮುಂಬೈಕರ್ ಸೇರ್ಪಡೆಯಾಗಿದ್ದಾರೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಮುಂಬೈ[ಅ.05]: ಭಾರತ ಟೆಸ್ಟ್ ತಂಡದ ಉಪ ನಾಯಕ ಅಜಿಂಕ್ಯ ರಹಾನೆಹೆಣ್ಣು ಮಗುವಿಗೆ ತಂದೆಯಾಗಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಅದ್ಭುತ ಪ್ರದರ್ಶನದ ಮೂಲಕ ತಂಡಕ್ಕೆ ಕಮ್ ಬ್ಯಾಕ್ ಮಾಡಿದ್ದ ರಹಾನೆ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನಾಡುತ್ತಿದ್ದಾರೆ. ಇದೀಗ ರಹಾನೆ ಪತ್ನಿ, ರಾಧಿಕಾ ದೋಪ್ವಾಕರ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

IPL 2020: ಹೊಸ ತಂಡದತ್ತ ಮುಖಮಾಡಿದ ರಹಾನೆ..?

ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗ ಹರ್ಭಜನ್ ಸಿಂಗ್, ರಹಾನೆ ಕುಟುಂಬಕ್ಕೆ ಹೊಸ ಸದಸ್ಯನ ಎಂಟ್ರಿಯನ್ನು ಸಾಮಾಜಿಕ ಜಾಲತಾಣವಾದ ಟ್ವಿಟರ್’ನಲ್ಲಿ ಖಚಿತಪಡಿಸಿದ್ದಾರೆ. ಇದೇ ವರ್ಷದ ಜುಲೈನಲ್ಲಿ ರಹಾನೆ ದಂಪತಿ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪ್ರಗ್ನೆನ್ಸಿ ವಿಚಾರವನ್ನು ತಿಳಿಸಿದ್ದರು. 

ರಹಾನೆ-ರಾಧಿಕಾ ಜೋಡಿ, ಡಿಸೆಂಬರ್, 2014ರಲ್ಲಿ ಸಾಂಪ್ರದಾಯಿಕ ರೀತಿಯಲ್ಲೇ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಬಾಲ್ಯದ ಗೆಳತಿಯಾಗಿದ್ದ ರಾಧಿಕಾರನ್ನು ವರಿಸಿ 5 ವರ್ಷಗಳ ಬಳಿಕ ರಹಾನೆ ಕುಟುಂಬಕ್ಕೆ ಹೊಸ ಅತಿಥಿಯ ಆಗಮನವಾಗಿದೆ. 

ನಾಯಕನಿಂದ ಕಡೆಗಣಿಸಲ್ಪಟ್ಟ ರಹಾನೆ ಈಗ ತಂಡದ ಸ್ಟಾರ್!

ರಹಾನೆಯಾಗಲಿ, ರಾಧಿಕಾ ಆಗಲಿ ಸಾಮಾಜಿಕ ಜಾಲತಾಣದ ಮೂಲಕ ಈ ವಿಚಾರವನ್ನು ತಿಳಿಸಿಲ್ಲ. ಆದರೆ ಭಾರತ-ದಕ್ಷಿಣ ಆಫ್ರಿಕಾ ನಡುವಿನ ನಾಲ್ಕನೇ ದಿನದಾಟ ಆರಂಭವಾದ ಕೆಲಹೊತ್ತಿನಲ್ಲೇ ಹರ್ಭಜನ್ ಸಿಂಗ್ ಖಚಿತ ಪಡಿಸಿದ್ದಾರೆ. ’ತಂದೆಯಾಗಿದ್ದಕ್ಕೆ ರಹಾನೆಗೆ ಅಭಿನಂಧನೆಗಳು. ತಾಯಿ ಹಾಗೂ ಯುವರಾಣಿ ಚೆನ್ನಾಗಿದ್ದಾರೆ ಎಂದು ಭಾವಿಸುತ್ತೇನೆ’ ಎಂದು ಟ್ವೀಟ್ ಮಾಡಿದ್ದಾರೆ. 

ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ನಾಲ್ಕನೇ ದಿನದಾಟದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 431 ರನ್’ಗಳಿಗೆ ಆಲೌಟ್ ಮಾಡುವ ಮೂಲಕ ಟೀಂ ಇಂಡಿಯಾ 71 ರನ್’ಗಳ ಮುನ್ನಡೆ ಸಾಧಿಸಿತು. ಇನ್ನು ಎರಡನೇ ಇನಿಂಗ್ಸ್ ಆರಂಭಿಸಿರುವ ಭಾರತ 28.1 ಓವರ್ ಮುಕ್ತಾಯದ ವೇಳೆಗೆ 1 ವಿಕೆಟ್ ಕಳೆದುಕೊಂಡು 74 ರನ್ ಬಾರಿಸಿದ್ದು ಒಟ್ಟಾರೆ 145 ರನ್ ಮುನ್ನಡೆ ಸಾಧಿಸಿದೆ. ರೋಹಿತ್ ಶರ್ಮಾ 50 ರನ್ ಬಾರಿಸಿದ್ದು, ಪೂಜಾರ 16 ರನ್ ಬಾರಿಸಿ ಬ್ಯಾಟಿಂಗ್ ನಡೆಸುತ್ತಿದ್ದಾರೆ.  

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಚಿನ್ನಸ್ವಾಮಿಯಲ್ಲಿ ಪಂದ್ಯ ಆಯೋಜನೆಗೆ ಸರ್ಕಾರದ ಅನುಮತಿ, ಕಂಡೀಷನ್ ಏನು?
ಆರ್‌ಸಿಬಿ ಫ್ಯಾನ್ಸ್‌ಗೆ ಗುಡ್ ನ್ಯೂಸ್, ಚಿನ್ನಸ್ವಾಮಿಯಲ್ಲಿ ಐಪಿಎಲ್ ಪಂದ್ಯ ನಡೆಸಲು ಸರ್ಕಾರ ಅನುಮತಿ