
ನೇಪಿಯರ್(ಜ.22): ತಂಡ ಆಲ್ರೌಂಡರ್ ಸಮಸ್ಯೆ ಎದುರಿಸಿದರೆ ಟೀಂ ಕಾಂಬಿನೇಷನ್ ಜಟಿಲವಾಗಲಿದೆ. ಇದನ್ನ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಕೂಡ ಒಪ್ಪಿಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ಅಲಭ್ಯತೆಯಿಂದ 3ನೇ ವೇಗಿಯನ್ನ ಕಣಕ್ಕಿಳಿಸುವುದು ಅನಿವಾರ್ಯವಾಗಲಿದೆ ಎಂದು ಕೊಹ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಐಸಿಸಿ ಪ್ರಕಟಿಸಿದ ಬೆಸ್ಟ್ ಟೆಸ್ಟ್ ಮತ್ತು ಒನ್’ಡೇ ತಂಡವಿದು..!
ಖಾಸಗಿ ಟಿವಿ ಕಾರ್ಯಕ್ರಮದಲ್ಲಿ ಮಹಿಳೆಯರ ಕುರಿತು ಅಸಭ್ಯ ಹೇಳಿಕೆಯಿಂದ ಹಾರ್ದಿಕ್ ಪಾಂಡ್ಯ ಅಮಾನತಾಗಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ತಂಡ 3ನೇ ವೇಗಿಯನ್ನ ಅನಿವಾರ್ಯವಾಗಿ ಕಣಕ್ಕಿಳಿಸಬೇಕಿದೆ. ಹಾರ್ದಿಕ್ ಈ ಸ್ಥಾನ ತುಂಬುತ್ತಿದ್ದರು ಎಂದು ಕೊಹ್ಲಿ ಹೇಳಿದ್ದಾರೆ.
ಇದನ್ನೂ ಓದಿ: ಕಷ್ಟದಲ್ಲಿರೋ ಮಾಜಿ ಕ್ರಿಕೆಟಿಗನಿಗೆ ಪಾಂಡ್ಯ ಬ್ಲ್ಯಾಂಕ್ ಚೆಕ್: ಆದ್ರೆ ಕಂಡೀಶನ್ ಅಪ್ಲೈ!
ಫಾಸ್ಟ್ ಆಲ್ರೌಂಡರ್ ತಂಡದಲ್ಲಿದ್ದರೆ, ಬ್ಯಾಟಿಂಗ್ ವಿಭಾಗದ ಜೊತಗೆ ಬೌಲಿಂಗ್ ಕೂಡ ಬಲಿಷ್ಠಗೊಳ್ಳಲಿದೆ. ಆದರೆ 3 ವೇಗಿಗಳನ್ನ ಕಣಕ್ಕಿಳಿಸಿದರೆ ಮಧ್ಯಮ ಕ್ರಮಾಂಕದ ಮೇಲೆ ಪರಿಣಾಮ ಬೀರಲಿದೆ ಎಂದಿದ್ದಾರೆ. ತಂಡದಲ್ಲಿ ಅತ್ಯುತ್ತಮ ಆಲ್ರೌಂಡರ್ ಇದ್ದರೆ, 3ನೇ ವೇಗಿ ಕಣಕ್ಕಿಳಿಸುವ ಅನಿವಾರ್ಯತೆ ಎದುರಾಗಲ್ಲ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.