ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಅನಿಲ್ ಕುಂಬ್ಳೆ ಭೇಟಿ!

By Web DeskFirst Published Apr 28, 2019, 9:03 PM IST
Highlights

ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗ, ಮಾಜಿ ಕೋಚ್ ಅನಿಲ್ ಕುಂಬ್ಳೆ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ವಿಶೇಷ  ಪೂಜೆ ಸಲ್ಲಿಸಿದ್ದಾರೆ. ಕುಂಬ್ಳೆ ಭೇಟಿ ವಿವರ ಇಲ್ಲಿದೆ.

ಗೋಕರ್ಣ(ಏ.28): ಭಾರತದ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಸದ್ಯ ಐಪಿಎಲ್ ಟೂರ್ನಿಲ್ಲಿ ಬ್ಯುಸಿಯಾಗಿದ್ದರೆ, ಇತ್ತ ಟೀಂ ಇಂಡಿಯಾ ಮಾಜಿ ನಾಯಕ ಹಾಗೂ ಕೋಚ್ ಅನಿಲ್ ಕುಂಬ್ಳೆ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ದೇವಾಲಯಕ್ಕೆ ಭೇಟಿ ನೀಡಿದ ಅನಿಲ್ ಕುಂಬ್ಳೆ ದಂಪತಿ , ಪ್ರಸಿದ್ಧ ಶಿವನ ಆತ್ಮಲಿಂಗಕ್ಕೆ ಪೂಜೆ ಹಾಗೂ ಅಭಿಷೇಕ ನೆರವೇರಿಸಿದರು.

ಇದನ್ನೂ ಓದಿ: ವಿಶ್ವಕಪ್ 2019: ಟೀಂ ಇಂಡಿಯಾ ಪ್ರಕಟಿಸಿದ ಅನಿಲ್ ಕುಂಬ್ಳೆ!

ಕುಂಬ್ಳೆ ದಂಪತಿ, ಶಿವನ ದೇವಾಲಯದಲ್ಲಿ ವಿಶೇಷ, ಪೂಜೆ ನೆರವೇರಿಸಿದರು. ನವಧಾನ್ಯ, ಗಂಗಾಭಿಷೇಕ ಪೂಜೆ ಹಾಗೂ ಆತ್ಮಲಿಂಗಕ್ಕೆ ಪಂಜಾಮೃತ ಪೂಜೆ ಸಲ್ಲಿಸಿದರು.  ಈ ವೇಳೆ ಗೋಕರ್ಣ ಶ್ರೀ ಮಹಾಬಲೇಶ್ವರ ದೇವಸ್ಥಾನದ ಅರ್ಚಕರು ಸ್ಮರಣಿಕೆ ನೀಡಿ ಗೌರವಿಸಿದರು. 

ಇದನ್ನೂ ಓದಿ: ಅನಿಲ್ ಕುಂಬ್ಳೆ ರಾಜೀನಾಮೆ ಸೀಕ್ರೆಟ್ಸ್ ಬಿಚ್ಚಿಟ್ಟ ಲಕ್ಷ್ಮಣ್..!

ಆಡಳಿತ ಮಂಡಳಿ ಸದಸ್ಯರು ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗನ ಜೊತೆ ಫೋಟೋ ತೆಗಿಸಿಕೊಂಡು ಸಂಭ್ರಮಿಸಿದರು. ಟೆಸ್ಟ್ ಕ್ರಿಕೆಟ್‌ನಲ್ಲಿ 619 ವಿಕೆಟ್ ಕಬಳಿಸಿರುವ ಕುಂಬ್ಳೆ, ಗರಿಷ್ಠ ವಿಕೆಟ್ ಕಬಳಿಸಿದ ಪಟ್ಟಿಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ. 

click me!