
ನವದೆಹಲಿ(ಜು.29): ಟೀಂ ಇಂಡಿಯಾ ಮಾಜಿ ನಾಯಕ, ಕನ್ನಡಿಗ ಅನಿಲ್ ಕುಂಬ್ಳೆ ನೇತೃತ್ವದ ಐಸಿಸಿ ಕ್ರಿಕೆಟ್ ಸಮಿತಿ, ವಿವಾದಾತ್ಮಕ ಬೌಂಡರಿ ಕೌಂಟ್ ಸೇರಿದಂತೆ ಇನ್ನೂ ಹತ್ತು ಹಲವು ನಿಯಮಗಳ ಬಗ್ಗೆ ಮುಂದಿನ ಮೀಟಿಂಗ್ನಲ್ಲಿ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಿದೆ ಎಂದು ಐಸಿಸಿ ಮುಖ್ಯ ವ್ಯವಸ್ಥಾಪಕ ಜೆಫ್ ಅಲ್ಲಾರ್ಡೀಸ್ ಹೇಳಿದ್ದಾರೆ.
ವಿಶ್ವಕಪ್ ಇತಿಹಾಸದಲ್ಲೇ ರೋಚಕ ಪಂದ್ಯ; ಸೂಪರ್ ಓವರ್ನಲ್ಲಿ ಇಂಗ್ಲೆಂಡ್ ಚಾಂಪಿಯನ್!
ಕುಂಬ್ಳೆ ನೇತೃತ್ವದ ತಜ್ಞರ ಸಮಿತಿಯು ಐಸಿಸಿ 2019ರ ವಿಶ್ವಕಪ್ ಫೈನಲ್ನಲ್ಲಿ ಉಂಟಾದ ಗೊಂದಲದ ತೀರ್ಮಾನಗಳು ಸೇರಿದಂತೆ ಕ್ರಿಕೆಟ್ನ ಇನ್ನಿತರ ವಿಚಾರಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದವರು ಹೇಳಿದ್ದಾರೆ.
ಸೂಪರ್ ಓವರ್ ನಿಯಮಗಳೇನು..? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
ಬಾಲ್ ಔಟ್ ಬದಲಾಗಿ 2009ರಿಂದ ಐಸಿಸಿ ಟೂರ್ನಮೆಂಟ್ಗಳಲ್ಲಿ ಪಂದ್ಯ ಟೈ ಆದಾಗ ಸೂಪರ್ ಓವರ್ಗಳ ಮೂಲಕ ಪಂದ್ಯದ ಫಲಿತಾಂಶವನ್ನು ನಿರ್ಧರಿಸಲಾಗುತ್ತಿದೆ. ಸೂಪರ್ ಓವರ್ನಲ್ಲೂ ಪಂದ್ಯ ಟೈ ಆದರೆ ಟೈ-ಬ್ರೇಕರ್ ರೂಪದಲ್ಲಿ ಅತಿಹೆಚ್ಚು ಬೌಂಡರಿ ಬಾರಿಸಿದ ಆಧಾರದಲ್ಲಿ ಫಲಿತಾಂಶ ಘೋಷಿಸಲಾಗುತ್ತಿದೆ ಎಂದು ಜೆಫ್ ಹೇಳಿದ್ದಾರೆ.
ಸೂಪರ್ ಓವರ್ ಕೂಡಾ ಟೈ: ಐಸಿಸಿ ಬೌಂಡರಿ ನಿಯಮಕ್ಕೆ ಕಿಡಿಕಾರಿದ ಕ್ರಿಕೆಟಿಗರು..!
ಜುಲೈ 14ರಂದು ಲಾರ್ಡ್ಸ್ ಮೈದಾನದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಸೂಪರ್ ಓವರ್'ನಲ್ಲೂ ಪಂದ್ಯ ಟೈ ಆಗಿದ್ದರಿಂದ ಒಟ್ಟು 22 ಬೌಂಡರಿ ಹಾಗೂ 2 ಸಿಕ್ಸರ್ ಸಿಡಿಸಿದ್ದ ಇಂಗ್ಲೆಂಡ್ ತಂಡವನ್ನು ಜಯಶಾಲಿ ಎಂದು ನಿರ್ಣಯಿಸಲಾಯಿತು. ಇಂಗ್ಲೆಂಡ್ ತಂಡದಷ್ಟೇ ರನ್ ಮಾಡಿದ್ದ ನ್ಯೂಜಿಲೆಂಡ್ ಕೇವಲ 17 ಬೌಂಡರಿ ಬಾರಿಸಿದ್ದರಿಂದ ಐಸಿಸಿ ನಿಯಮದಂತೆ ಸೋಲೊಪ್ಪಿಕೊಳ್ಳಬೇಕಾಯಿತು. ಈ ನಿಯಮಕ್ಕೆ ಹಾಲಿ ಹಾಗೂ ಮಾಜಿ ಕ್ರಿಕೆಟಿಗರು ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.