ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ

Published : Dec 17, 2017, 01:26 PM ISTUpdated : Apr 11, 2018, 12:47 PM IST
ಟಾಸ್ ಗೆದ್ದ ಟೀಂ ಇಂಡಿಯಾ ಫೀಲ್ಡಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ

ಸಾರಾಂಶ

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು ಈಗಾಗಲೇ ತಲಾ ಒಂದೊಂದು ಪಂದ್ಯಗಳನ್ನು ಗೆದ್ದುಕೊಂಡಿವೆ. ಇದೀಗ ಅಂತಿಮ ಪಂದ್ಯವನ್ನು ಗೆದ್ದವರು ಸರಣಿ ಎತ್ತಿಹಿಡಿಯಲಿದ್ದಾರೆ.

ವೈಜಾಗ್(ಡಿ.17): ಭಾರತ-ಶ್ರೀಲಂಕಾ ನಡುವಿನ ಫೈನಲ್ ಫೈಟ್'ನಲ್ಲಿ ಟಾಸ್ ಗೆದ್ದ ಹಂಗಾಮಿ ನಾಯಕ ರೋಹಿತ್ ಶರ್ಮಾ ಕ್ಷೇತ್ರ ರಕ್ಷಣೆ ಆಯ್ದುಕೊಂಡಿದ್ದಾರೆ.

ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು ಈಗಾಗಲೇ ತಲಾ ಒಂದೊಂದು ಪಂದ್ಯಗಳನ್ನು ಗೆದ್ದುಕೊಂಡಿವೆ. ಇದೀಗ ಅಂತಿಮ ಪಂದ್ಯವನ್ನು ಗೆದ್ದವರು ಸರಣಿ ಎತ್ತಿಹಿಡಿಯಲಿದ್ದಾರೆ.

ಇನ್ನು ಉಭಯ ತಂಡಗಳಲ್ಲಿ ಒಂದೊಂದು ಬದಲಾವಣೆ ಮಾಡಲಾಗಿದ್ದ, ಅನಾರೋಗ್ಯ ಸಮಸ್ಯೆ ಎದುರಿಸುತ್ತಿರುವ ವಾಷಿಂಗ್ಟನ್ ಸುಂದರ್ ಬದಲಿಗೆ ಕುಲ್ದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಶ್ರೀಲಂಕಾ ಲಹೀರು ತಿರುಮನ್ನೆ ಬದಲಿಗೆ ಸದೀರ ಸಮರವಿಕ್ರಮ ಸ್ಥಾನ ಪಡೆದಿದ್ದಾರೆ.

ತಂಡಗಳು ಹೀಗಿವೆ:

ಭಾರತ: ರೋಹಿತ್, ಧವನ್, ಅಯ್ಯರ್, ಧೋನಿ, ಪಾಂಡ್ಯ, ಪಾಂಡೆ, ಕಾರ್ತಿಕ್, ಭುವನೇಶ್ವರ್ ಕುಮಾರ್, ಬುಮ್ರಾ, ಕುಲ್ದೀಪ್, ಚಾಹಲ್.

ಶ್ರೀಲಂಕಾ: ಗುಣತಿಲಕ, ತರಂಗಾ, ಸಮರವಿಕ್ರಮ, ಮ್ಯಾಥ್ಯೂಸ್, ಡಿಕ್'ವೆಲ್ಲಾ, ಗುಣರತ್ನೆ, ಪೆರೇರಾ, ಪತಿರಣ, ಧನಂಜಯ, ಲಕ್ಮಲ್, ಪ್ರದೀಪ್.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಎರಡು ಅಪರೂಪದಲ್ಲೇ ಅಪರೂಪದ ದಾಖಲೆ ಬರೆಯಲು ರೆಡಿಯಾದ ಟೀಂ ಇಂಡಿಯಾ!
ಕರ್ನಾಟಕದ ಅಭಿಮನ್ಯು ಮಿಥುನ್ ದಾಖಲೆ ಸರಿಗಟ್ಟಿದ ಬೌಲರ್‌, ಟಿ20ಯ ಒಂದೇ ಓವರ್‌ನಲ್ಲಿ ಐದು ವಿಕೆಟ್‌ ವಿಶ್ವದಾಖಲೆ!