ಮುರಳಿ ಜೀವನಾಧಾರಿತ ಸಿನಿಮಾದಲ್ಲಿ ತೆಂಡುಲ್ಕರ್‌ ಅಭಿನಯ..?

Published : Aug 01, 2019, 12:58 PM IST
ಮುರಳಿ ಜೀವನಾಧಾರಿತ ಸಿನಿಮಾದಲ್ಲಿ ತೆಂಡುಲ್ಕರ್‌ ಅಭಿನಯ..?

ಸಾರಾಂಶ

ಮಿಲ್ಕಾ ಸಿಂಗ್, ಎಂ.ಎಸ್ ಧೋನಿ, ಸಚಿನ್ ತೆಂಡುಲ್ಕರ್ ಬಳಿಕ ಮತ್ತೋರ್ವ ಕ್ರಿಕೆಟ್ ದಂತಕಥೆ ಮುತ್ತಯ್ಯ ಮುರಳೀಧರನ್ ಅವರ ಜೀವನಾಧಾರಿತ ಚಿತ್ರ ತೆರೆಗೆ ಅಪ್ಪಳಿಸಲಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ..

ನವದೆಹಲಿ(ಆ.01): ಶ್ರೀಲಂಕಾದ ದಿಗ್ಗಜ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್‌ರ ಜೀವನಾಧಾರಿತ ಸಿನಿಮಾದಲ್ಲಿ ‘ಕ್ರಿಕೆಟ್‌ ದೇವರು’ ಎಂದೇ ಕರೆಸಿಕೊಳ್ಳುವ ಸಚಿನ್‌ ತೆಂಡುಲ್ಕರ್‌ ಕಾಣಿಸಿಕೊಳ್ಳಲಿದ್ದಾರೆ. ಚಿತ್ರ ತಂಡ ಈ ವಿಷಯವನ್ನು ಖಚಿತಪಡಿಸಿದೆ.

ಸೆಟ್ಟೇರಲಿದೆ ಮುತ್ತಯ್ಯ ಮುರುಳೀಧರನ್ ಬಯೋಪಿಕ್

ಈ ವರ್ಷ ಡಿಸೆಂಬರ್‌ನಲ್ಲಿ ಚಿತ್ರೀಕರಣ ಆರಂಭಗೊಳ್ಳಲಿದ್ದು, ಮುಂದಿನ ವರ್ಷ ಚಿತ್ರ ತೆರೆ ಕಾಣಲಿದೆ. ಮುರಳಿಧರನ್‌ ಹಾಗೂ ಸಚಿನ್‌ ಹಲವು ರೋಚಕ ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, ಒಬ್ಬರ ವಿರುದ್ಧ ಮತ್ತೊಬ್ಬರು ಪ್ರಮುಖ ದಾಖಲೆಗಳನ್ನು ಹೊಂದಿದ್ದಾರೆ. ಹೀಗಾಗಿ ಮುರಳಿ ಜೀವನ ಕುರಿತ ಚಿತ್ರದಲ್ಲಿ ಸಚಿನ್‌ ಕಾಣಿಸಿಕೊಳ್ಳುವುದು ಬಹು ಮುಖ್ಯ ಎಂದು ಚಿತ್ರ ತಂಡ ತಿಳಿಸಿದೆ. ಸಚಿನ್ ತೆಂಡುಲ್ಕರ್ ಮಾತ್ರವಲ್ಲದೇ ರಣತುಂಗಾ, ಜಯಸೂರ್ಯ, ಮಾಲಿಂಗ, ರಿಕಿ ಪಾಂಟಿಂಗ್‌ ಸೇರಿದಂತೆ ಇನ್ನೂ ಕೆಲ ಕ್ರಿಕೆಟಿಗರು ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.

ಮುತ್ತಯ್ಯ 800 ವಿಕೆಟ್: ನೆನಪಿದೆಯಾ ಆ ಕೊನೆಯ ಓವರ್..?

ಬಾಹುಬಲಿ ಚಿತ್ರದಲ್ಲಿ ಖಳನಟನಾಗಿ ಮಿಂಚಿದ್ದ ರಾಣಾ ದಗ್ಗುಬಾಟಿ ಸಹನಿರ್ದೇಶನದಲ್ಲಿ ಮೂಡಿಬರಲಿರುವ ಈ ಚಿತ್ರವು 2020ರ ವೇಳೆಗೆ ತೆರೆಗೆ ಅಪ್ಪಳಿಸಲಿದೆ ಎನ್ನಲಾಗಿದೆ. ಮುತ್ತಯ್ಯ ಮುರಳೀಧರನ್ ಪಾತ್ರದಲ್ಲಿ ತಮಿಳು ನಟ ವಿಜಯ್ ಸೇತುಪತಿ ಕಾಣಿಸಿಕೊಳ್ಳಲಿದ್ದಾರೆ.

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಶ್ಮಿಕಾ- ಸ್ಮೃತಿ ಇಬ್ಬರ ಎಂಗೇಜ್​ಮೆಂಟೂ ಮುರಿದುಬಿತ್ತು: ಮಂದಣ್ಣ- ಮಂಧಾನ ಹೆಸರಲ್ಲಿ ಏನಿದೆ ಗ್ರಹಚಾರ?
One8 ಸ್ಪೋರ್ಟ್ಸ್ ಬ್ರ್ಯಾಂಡ್ ಮಾರಾಟಕ್ಕೆ ಮುಂದಾದ ಕೊಹ್ಲಿ, 40 ಕೋಟಿ ಹೂಡಿಕೆ ಪ್ಲಾನ್