
ನವದೆಹಲಿ(ಆ.14): ಭಾರತ ಕ್ರಿಕೆಟ್ ತಂಡದ ವ್ಯವಸ್ಥಾಪಕ ಸುನಿಲ್ ಸುಬ್ರಮಣ್ಯಂ ವಿವಾದ ಸೃಷ್ಟಿಸಿ ಬಿಸಿಸಿಐನಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ.
ಇಂಡೋ-ವಿಂಡೀಸ್ ಫೈಟ್: ಸರಣಿ ಜಯದ ಮೇಲೆ ಕಣ್ಣಿಟ್ಟ ಭಾರತ
ವಿಂಡೀಸ್ ಪ್ರವಾಸದಲ್ಲಿರುವ ಭಾರತ ತಂಡದೊಂದಿಗಿರುವ ಅವರು, ಟ್ರಿನಿಡಾಡ್ ಹಾಗೂ ಟೊಬೇಗೋಯಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳ ಜತೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ತಿಳಿದು ಬಂದಿದೆ. ಸರ್ಕಾರದ ಮಾರ್ಗಸೂಚಿ ಅನುಸರಿಸಿ ಭಾರತ ತಂಡ ಜಲ ಸಂರಕ್ಷಣೆ ಕುರಿತು ಸಣ್ಣ ಜಾಹೀರಾತು ಚಿತ್ರೀಕರಿಸಬೇಕಿತ್ತು. ಆಟಗಾರರ ವೇಳಾಪಟ್ಟಿ ನೋಡಿಕೊಂಡು ಚಿತ್ರೀಕರಣಕ್ಕೆ ವ್ಯವಸ್ಥೆ ಮಾಡಲು ಸುನಿಲ್ರನ್ನು ಸಂಪರ್ಕಿಸುವಂತೆ ಅಲ್ಲಿನ ರಾಯಭಾರ ಕಚೇರಿಗೆ ಬಿಸಿಸಿಐ ತಿಳಿಸಿತ್ತು.
ಅದ್ಭುತ ಆವಿಷ್ಕಾರ: ಕ್ರಿಕೆಟ್ನಲ್ಲಿ ಶೀಘ್ರ ಸ್ಮಾರ್ಟ್ಬಾಲ್ ಬಳಕೆ!
ಆದರೆ ಅಧಿಕಾರಿಗಳು ಕರೆ ಮಾಡಿದಾಗ ಸ್ವೀಕರಿಸದ ಸುನಿಲ್, ‘ಸಂದೇಶಗಳ ಪ್ರವಾಹ ಹರಿಸಬೇಡಿ’ ಎಂದು ಕಟುವಾಗಿ ಪ್ರತಿಕ್ರಿಯಿಸಿದ್ದಾರೆ. ಅವರ ಈ ವರ್ತನೆ ಬಿಸಿಸಿಐಗೆ ಸಿಟ್ಟು ತರಿಸಿದೆ. ವಿಂಡೀಸ್ ಪ್ರವಾಸದ ಬಳಿಕ ಸುನಿಲ್ ಗುತ್ತಿಗೆ ಅವಧಿ ಪೂರ್ಣಗೊಳ್ಳಲಿದ್ದು, ಅವರು ತಂಡದೊಂದಿಗೆ ಮುಂದುವರಿಯುವ ಸಾಧ್ಯತೆ ಕಡಿಮೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.