ರಾಂಚಿ ಪಂದ್ಯವನ್ನು ಸೈನಿಕರಿಗೆ ಅರ್ಪಿಸಿದ ಟೀಂ ಇಂಡಿಯಾ

Published : Mar 08, 2019, 01:25 PM ISTUpdated : Mar 08, 2019, 01:59 PM IST
ರಾಂಚಿ ಪಂದ್ಯವನ್ನು ಸೈನಿಕರಿಗೆ ಅರ್ಪಿಸಿದ ಟೀಂ ಇಂಡಿಯಾ

ಸಾರಾಂಶ

ಟಾಸ್’ಗೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸಹ ಆಟಗಾರರಿಗೆ ಸೇನಾ ಕ್ಯಾಪ್ ವಿತರಿಸಿದರು. ಭಾರತೀಯ ಸೈನಿಕರಿಗೆ ಗೌರವ ಸೂಚಕವಾಗಿ ಟೀಂ ಇಂಡಿಯಾ ಕ್ರಿಕೆಟಿಗರು ಸೇನಾ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದಾರೆ. ಟೀಂ ಇಂಡಿಯಾದ ಈ ನಡೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. 

ರಾಂಚಿ[ಮಾ.08]: ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸೇನಾ ಕ್ಯಾಪ್ ಧರಿಸಿ ಕಣಕ್ಕಿಳಿಯುವ ಮೂಲಕ ಪುಲ್ವಾಮಾದಲ್ಲಿ ಹುತಾತ್ಮರಾದ ವೀರ ಯೋಧರಿಗೆ  ಗೌರವ ಸೂಚಿಸಿದೆ.

ರಾಂಚಿ ಫೈಟ್: ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ

ಟಾಸ್’ಗೂ ಮುನ್ನ ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಸಹ ಆಟಗಾರರಿಗೆ ಸೇನಾ ಕ್ಯಾಪ್ ವಿತರಿಸಿದರು. ಭಾರತೀಯ ಸೈನಿಕರಿಗೆ ಗೌರವ ಸೂಚಕವಾಗಿ ಟೀಂ ಇಂಡಿಯಾ ಕ್ರಿಕೆಟಿಗರು ಸೇನಾ ಕ್ಯಾಪ್ ಧರಿಸಿ ಕಣಕ್ಕಿಳಿದಿದ್ದಾರೆ.

ಹೀಗಿತ್ತು ಆ ಕ್ಷಣ:

ಟಾಸ್ ಗೆದ್ದ ಬಳಿಕ ಮಾತನಾಡಿದ ಕೊಹ್ಲಿ, ಇದೊಂದು ವಿಶೇಷ ಕ್ಯಾಪ್. ನಮ್ಮ ಸೈನಿಕರಿಗೆ ಗೌರವ ಸೂಚಕವಾಗಿ ಈ ಸೇನಾ ಕ್ಯಾಪ್ ಧರಿಸಿ ಕಣಕ್ಕಿಳಿಯುತ್ತಿದ್ದೇವೆ. ನಾವೆಲ್ಲಾ ಈ ಪಂದ್ಯದ ಸಂಪೂರ್ಣ ಸಂಭಾವನೆಯನ್ನು ಭಾರತೀಯ ಸೇನಾ ನಿಧಿಗೆ ಅರ್ಪಿಸುತ್ತಿದ್ದೇವೆ. ದೇಶದ ಪ್ರತಿಯೊಬ್ಬರು ನಮ್ಮ ಸೇನೆಯ ಹಾಗೂ ಅವರ ಕುಟುಂಬಕ್ಕೆ ಬೆಂಬಲವಾಗಿ ನಿಲ್ಲಬೇಕು ಎಂದು ಮನವಿ ಮಾಡಿದರು. ಟೀಂ ಇಂಡಿಯಾದ ಈ ನಡೆ ವ್ಯಾಪಕ ಮೆಚ್ಚುಗೆಗೆ ಪಾತ್ರವಾಗಿದೆ. 

ಪುಲ್ವಾಮಾದಲ್ಲಿ ಫೆಬ್ರವರಿ 14ರಂದು ನಡೆದ ಆತ್ಮಾಹುತಿ ದಾಳಿಯಲ್ಲಿ ಭಾರತದ 44 ಸಿಆರ್’ಪಿಎಫ್ ಯೋಧರು ಹುತಾತ್ಮರಾಗಿದ್ದರು. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಕುಸಿದ ಟೀಂ ಇಂಡಿಯಾ!
ಕೋಲ್ಕತಾ ಸ್ಟೇಡಿಯಂನಿಂದ ಲಿಯೋನೆಲ್ ಮೆಸ್ಸಿ ಬೇಗ ನಿರ್ಗಮನ; ಮಿತಿಮೀರಿದ ಅಭಿಮಾನಿಗಳ ದಾಂಧಲೆ!