INDvSA T20: ಬೆಂಗಳೂರು ಪಂದ್ಯಕ್ಕೆ ಬದಲಾವಣೆ; ಕನ್ನಡಿಗನಿಗೆ ಸ್ಥಾನ?

By Web DeskFirst Published Sep 21, 2019, 9:07 PM IST
Highlights

ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಹಾಗೂ ಅಂತಿಮ ಟಿ20 ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಬದಲಾವಣೆ ಸಾಧ್ಯತೆಗಳಿವೆ. ಬೆಂಗಳೂರು ಪಂದ್ಯಕ್ಕೆ ಕನ್ನಡಿಗನಿಗೆ ಅವಕಾಶ ಸಿಗುವು ನಿರೀಕ್ಷೆಗಳಿವೆ. 3ನೇ ಪಂದ್ಯಕ್ಕೆ ಸಂಭವನೀಯ ಟೀಂ ಇಂಡಿಯಾ ಪಟ್ಟಿ ಇಲ್ಲಿದೆ.

ಬೆಂಗಳೂರು(ಸೆ.21): ಟೀಂ ಇಂಡಿಯಾ ಹಾಗೂ ಸೌತ್ ಆಫ್ರಿಕಾ ನಡುವಿನ ಅಂತಿಮ ಚುಟುಕು ಸಮರಕ್ಕೆ  ಅಭಿಮಾನಿಗಳು ಕಾತರರಾಗಿದ್ದಾರೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ 3ನೇ ಟಿ20ಗೆ ಭಾರತ ತಂಡ ಕೂಡ ಸಕಲ ರೀತಿಯಲ್ಲಿ ಸಜ್ಜಾಗಿದೆ. ಬೆಂಗಳೂರು ಪಿಚ್‌ಗೆ ಅನುಗುಣವಾಗಿ ತಂಡದಲ್ಲಿ ಕೆಲ ಬದಲಾವಣೆಗಳಾಗೋ ಸಾಧ್ಯತೆಗಳಿವೆ.

ಇದನ್ನೂ ಓದಿ: #INDvSA ಬೆಂಗಳೂರು ಪಂದ್ಯ; ಮಳೆ ಬರುತ್ತಾ? ಪಂದ್ಯ ನಡೆಯುತ್ತಾ?

ಬೆಂಗಳೂರು ಬ್ಯಾಟ್ಸ್‌ಮನ್ ಸಹಾಕಾರಿ ಪಿಚ್. ಹೀಗಾಗಿ ತಂಡದಲ್ಲಿ ಒಂದು ಬದಲಾವಣೆಗಳಾಗವು ನಿರೀಕ್ಷೆಗಳಿವೆ. ಆಲ್ರೌಂಡರ್ ಕ್ರುನಾಲ್ ಪಾಂಡ್ಯ ಬದಲು, ಕನ್ನಡಿಗ ಮನೀಶ್ ಪಾಂಡೆಗೆ ಅವಕಾಶ ಸಿಗುವ ಸಾಧ್ಯತೆಗಳಿವೆ. ಇನ್ನುಳಿದಂತೆ ಬದಲಾವಣೆ ನಿರೀಕ್ಷಿಸುವುದು ಕಷ್ಟ.

ಇದನ್ನೂ ಓದಿ: ಬೆಂಗ್ಳೂರಲ್ಲಿ ಕೊಹ್ಲಿ ಪಡೆ ಬಿರುಸಿನ ಅಭ್ಯಾಸ

ಭಾರತ ಸಂಭವನೀಯ ತಂಡ:
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ(ನಾಯಕ), ರಿಷಬ್ ಪಂತ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ,  ಮನೀಶ್ ಪಾಂಡೆ, ರವೀಂದ್ರ ಜಡೇಜಾ, ವಾಶಿಂಗ್ಟನ್ ಸುಂದರ್, ದೀಪಕ್ ಚಹಾರ್, ನವದೀಪ್ ಸೈನಿ
 

click me!