
ಗಯಾನ[ಆ.08]: ಭಾರತ-ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ಕೆರಿಬಿಯನ್ ನೆಲದಲ್ಲಿ ಟಿ20 ಸರಣಿ ಕ್ಲೀನ್ ಸ್ವೀಪ್ ಮಾಡಿ ಬೀಗುತ್ತಿರುವ ಭಾರತ, ಇದೀಗ ಮತ್ತೊಮ್ಮೆ ಅಂತಹದ್ದೇ ಪ್ರದರ್ಶನದ ಕನವರಿಕೆಯಲ್ಲಿದೆ.
ಕೊಹ್ಲಿ- ರೋಹಿತ್ ಇಬ್ಬರಲ್ಲಿ ಯಾರು ಕ್ಲಿಕ್ ಆಗ್ತಾರೋ ಅವರೇ ನಂ.1
ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ನಲ್ಲಿ ಮುಖಭಂಗ ಅನುಭವಿಸಿದ ಬಳಿಕ ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ಒನ್ ಡೇ ಪಂದ್ಯ ಆಡಲು ಸಜ್ಜಾಗಿದೆ. ಗಾಯದಿಂದ ಚೇತರಿಸಿಕೊಂಡಿರುವ ಶಿಖರ್ ಧವನ್ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದು ರೋಹಿತ್ ಜತೆ ಇನಿಂಗ್ಸ್ ಆರಂಭಿಸಲಿದ್ದಾರೆ. ಆದ್ದರಿಂದ ಕೆ.ಎಲ್ ರಾಹುಲ್ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿಯಲಿದ್ದಾರೆ. ಇನ್ನು ಧೋನಿ ಅನುಪಸ್ಥಿತಿಯಲ್ಲಿ ರಿಷಭ್ ಪಂತ್ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯಲಿದ್ದಾರೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಇಲ್ಲವೇ ಮನೀಶ್ ಪಾಂಡೆ ಕಣಕ್ಕಿಳಿಯುವ ಸಾಧ್ಯತೆಯಿದೆ.
ಭಾರತ-ವಿಂಡೀಸ್ ನಡುವೆ ಇಂದು ಒನ್ ಡೇ ಫೈಟ್
ಬೌಲಿಂಗ್ ವಿಭಾಗದಲ್ಲಿ ಅನುಭವಿ ವೇಗಿ ಭುವನೇಶ್ವರ್ ಕುಮಾರ್’ಗೆ ವಿಶ್ರಾಂತಿ ನೀಡಿ, ಮತ್ತೋರ್ವ ವೇಗಿ ಮೊಹಮ್ಮದ್ ಶಮಿಗೆ ಅವಕಾಶ ನೀಡುವ ಸಾಧ್ಯತೆಯಿದೆ. ಇವರಿಗೆ ಸೈನಿ ಹಾಗೂ ಖಲೀಲ್ ಅಹಮ್ಮದ್ ಸಾಥ್ ನೀಡಲಿದ್ದಾರೆ. ಇಂದು ಬಹುತೇಕ ಸೈನಿ ಏಕದಿನ ಕ್ರಿಕೆಟ್’ಗೆ ಪದಾರ್ಪಣೆ ಮಾಡಲಿದ್ದಾರೆ. ಇನ್ನು ಸ್ಪಿನ್ ವಿಭಾಗದಲ್ಲಿ ಜಡೇಜಾ, ಕುಲ್ದೀಪ್ ಹಾಗೂ ಚಹಲ್ ಈ ಮೂವರ ಪೈಕಿ ಇಬ್ಬರಿಗೆ ಸ್ಥಾನ ಸಿಗಲಿದೆ. ಇನ್ನು ಮತ್ತೋರ್ವ ಆಲ್ರೌಂಡರ್ ಕೇದಾರ್ ಜಾಧವ್ ಆಡುವ ಹನ್ನೊಂದರ ಬಳಗದಲ್ಲಿ ಕಾಣಿಸಿಕೊಳ್ಳುತ್ತಾರಾ ಎನ್ನುವುದು ಸದ್ಯದ ಕುತೂಹಲ.
ಈ ಸಂದರ್ಭದಲ್ಲಿ ಸುವರ್ಣ ನ್ಯೂಸ್.ಕಾಂ ಆಯ್ಕೆ ಮಾಡಿದ ಟೀಂ ಇಂಡಿಯಾ ಆಡುವ ಹನ್ನೊಂದರ ಬಳಗ ಹೀಗಿದೆ ನೋಡಿ..
ಭಾರತ ತಂಡ:
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ರಿಷಭ್ ಪಂತ್, ರವೀಂದ್ರ ಜಡೇಜಾ, ಯುಜುವೇಂದ್ರ ಚಹಲ್, ಮೊಹಮ್ಮದ್ ಶಮಿ, ಖಲೀಲ್ ಅಹಮ್ಮದ್, ನವದೀಪ್ ಸೈನಿ.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.