
ಆಲೂರು(ಆ.26): ಇಂಡಿಯಾ ಎ, ಇಂಡಿಯಾ ಬಿ , ಸೌತ್ಆಫ್ರಿಕಾ ಎ ವಿರುದ್ದದ ಮಹತ್ವದ ಸರಣಿಯಿಂದ ಟೀಂ ಇಂಡಿಯಾ ಸ್ಪಿನ್ನರ್ ಜಯಂತ್ ಯಾದವ್ ಹೊರಬಿದ್ದಿದ್ದಾರೆ. ಈ ಮೂಲಕ ಸರಣಿ ಆರಂಭಕ್ಕೂ ಮುನ್ನವೇ ಭಾರತ ತಂಡಕ್ಕೆ ಆಘಾತ ಎದುರಾಗಿದೆ.
ಟೀಂ ಇಂಡಿಯಾ ಪರ 4 ಟೆಸ್ಟ್ ಹಾಗೂ ಏಕೈಕ ಏಕದಿನ ಪಂದ್ಯ ಆಡಿರುವ ಜಯಂತ್ ಯಾದವ್ ಸದ್ಯ ಇಂಡಿಯಾ ಬಿ ತಂಡವನ್ನ ಪ್ರತಿನಿಧಿಸುತ್ತಿದ್ದಾರೆ. ಆದರೆ ಸದ್ಯ ಇಂಜುರಿಗೆ ತುತ್ತಾಗಿರುವ ಜಯಂತ್ ಯಾದವ್, ಬೆಂಗಳೂರಿನ ಸಮೀಪ ಆಲೂರಿನಲ್ಲಿ ನಡೆಯುತ್ತಿರುವ ಚತುಷ್ಕೋನ್ ಸರಣಿಗೆ ಅಲಭ್ಯರಾಗಿದ್ದಾರೆ.
ಇಂಡಿಯಾ ಬಿ ತಂಡ ಅತ್ಯುತ್ತಮ ಪ್ರದರ್ಶನದ ಮೂಲಕ 12 ಅಂಕಗಳನ್ನ ಸಂಪಾದಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ಆಡಿದ 4 ಪಂದ್ಯದಲ್ಲಿ 2 ಪಂದ್ಯದಲ್ಲಿ ಗೆಲುವು ಸಾಧಿಸಿದ್ದರೆ, ಇನ್ನುಳಿದ 2 ಪಂದ್ಯಗಳು ಮಳೆಯಿಂದ ರದ್ದಾಗಿತ್ತು. ಇದೀಗ ಜಯಂತ್ ಅಲಭ್ಯತೆ ತಂಡದ ಫಲಿತಾಂಶದ ಮೇಲೆ ಪರಿಣಾಮ ಬೀರಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.