ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ 2 ಬದಲಾವಣೆ

Published : Dec 02, 2017, 09:43 AM ISTUpdated : Apr 11, 2018, 12:59 PM IST
ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ 2 ಬದಲಾವಣೆ

ಸಾರಾಂಶ

ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಉಮೇಶ್ ಯಾದವ್ ಹಾಗೂ ಕೆ.ಎಲ್ ರಾಹುಲ್ ಹೊರಗುಳಿದಿದ್ದು ಅವರ ಬದಲಿಗೆ ಮೊಹಮ್ಮದ್ ಶಮಿ ಹಾಗೂ ಶಿಖರ್ ಧವನ್ ಸ್ಥಾನ ಗಿಟ್ಟಿಸಿದ್ದಾರೆ.

ನವದೆಹಲಿ(ಡಿ.02):  ಭಾರತ-ಶ್ರೀಲಂಕಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಮೂರು ಪಂದ್ಯಗಳ ಸರಣಿಯಲ್ಲಿ ಈಗಾಗಲೇ 1-0 ಮುನ್ನಡೆ ಕಾಯ್ದುಕೊಂಡಿರುವ ಟೀಂ ಇಂಡಿಯಾ ಸತತ 9ನೇ ಟೆಸ್ಟ್ ಸರಣಿ ಕೈವಶ ಮಾಡಿಕೊಳ್ಳುವ ವಿಶ್ವಾಸದಲ್ಲಿದೆ. ಭಾರತ ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದ್ದು, ಉಮೇಶ್ ಯಾದವ್ ಹಾಗೂ ಕೆ.ಎಲ್ ರಾಹುಲ್ ಹೊರಗುಳಿದಿದ್ದು ಅವರ ಬದಲಿಗೆ ಮೊಹಮ್ಮದ್ ಶಮಿ ಹಾಗೂ ಶಿಖರ್ ಧವನ್ ಸ್ಥಾನ ಗಿಟ್ಟಿಸಿದ್ದಾರೆ. ಇನ್ನು ಶ್ರೀಲಂಕಾ ತಂಡದಲ್ಲಿ 3 ಬದಲಾವಣೆ ಮಾಡಲಾಗಿದ್ದು, ರಂಗನಾ ಹೆರಾತ್, ತಿರುಮನ್ನೆ ಮತ್ತು ಸನಕ ಬದಲಿಗೆ ಸಂದಕನ್, ಧನಂಜಯ್ ಡಿಸಿಲ್ವಾ ಮತ್ತು ರೋಶೆನ್ ಸ್ಥಾನ ಪಡೆದಿದ್ದಾರೆ.

ರೋಶೆನ್ ಸಿಲ್ವಾ ಇಂದು ತಿಲಾನ್ ಸಮರವೀರ ಅವರಿಂದ ಕ್ಯಾಪ್ ಪಡೆಯುವ ಮೂಲಕ ಟೆಸ್ಟ್ ಕ್ರಿಕೆಟ್'ಗೆ ಪದಾರ್ಪಣೆ ಮಾಡಿದರು.

ತಂಡಗಳು ಹೀಗಿವೆ:

ಭಾರತ: ಧವನ್, ವಿಜಯ್, ಪೂಜಾರ, ಕೊಹ್ಲಿ(ನಾಯಕ), ರಹಾನೆ, ರೋಹಿತ್ ಶರ್ಮಾ, ಅಶ್ವಿನ್, ಸಾಹಾ, ಶಮಿ, ಇಶಾಂತ್ ಶರ್ಮಾ.

ಶ್ರೀಲಂಕಾ: ಸಮರವಿಕ್ರಮ, ಕರುಣಾರತ್ನೆ, ರೋಶೆನ್ ಸಿಲ್ವಾ, ಮ್ಯಾಥ್ಯೂಸ್, ಚಾಂಡಿಮಲ್(ನಾಯಕ), ಡಿಕ್'ವೆಲ್ಲಾ, ಧನಂಜಯ್ ಡಿ ಸಿಲ್ವಾ, ದಿಲ್ರುವಾನ್ ಪೆರೆರಾ, ಲಕ್ಮಲ್, ಸಂದಕನ್, ಗಮಾಗೆ

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಧರ ವಿಶ್ವಕಪ್ ಹೀರೋಯಿನ್ಸ್‌ಗಳಿಗೆ ದೊಡ್ಮನೆಯಿಂದ ಗೌರವ: ರಾಜ್ ಕುಟುಂಬದ ಆತಿಥ್ಯಕ್ಕೆ ಮೈಮರೆತ ಚಾಂಪಿಯನ್ನರು!
ಜೈಸ್ವಾಲ್‌ ಸಖತ್‌ ಸೆಂಚುರಿ, ಟೆಸ್ಟ್‌ ಸರಣಿ ಸೋಲಿಗೆ ಏಕದಿನದಲ್ಲಿ ಸೇಡು ತೀರಿಸಿಕೊಂಡ ಭಾರತ!