
ಬೆಂಗಳೂರು(ಸೆ.22): ಮಳೆ ಭೀತಿ ನಡುವೆಯೂ ಭಾರತ ಹಾಗೂ ಸೌತ್ ಆಫ್ರಿಕಾ ನಡುವಿನ 3ನೇ ಟಿ20 ಪಂದ್ಯದ ಟಾಸ್ ಪ್ರಕ್ರಿಯೆ ಮುಗಿದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಸೌತ್ ಆಫ್ರಿಕಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ಬುರನ್ ಹೆಂಡ್ರಿಕ್ಸ್ ತಂಡ ಸೇರಿಕೊಂಡಿದ್ದಾರೆ.
ಭಾರತ ತಂಡ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ಶಿಖರ್ ಧವನ್, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಕ್ರುನಾಲ್ ಪಾಂಡ್ಯ, ರವೀಂದ್ರ ಜಡೇಜಾ, ವಾಶಿಂಗ್ಟನ್ ಸುಂದರ್, ದೀಪಕ್ ಚಹಾರ್, ನವದೀಪ್ ಸೈನಿ
3 ಪಂದ್ಯಗಳ ಸರಣಿಯಲ್ಲಿ ಟೀಂ ಇಂಡಿಯಾ 1-0 ಮುನ್ನಡೆ ಸಾಧಿಸಿದೆ. ಮೊದಲ ಪಂದ್ಯ ಮಳೆಯಿಂದ ರದ್ದಾಗಿತ್ತು. ಇನ್ನು ದ್ವಿತೀಯ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು. ಇದೀಗ ಬೆಂಗಳೂರು ಪಂದ್ಯ ಗೆದ್ದು ಸರಣಿ ಕೈವಶ ಮಾಡಲು ಟೀಂ ಇಂಡಿಯಾ ತುದಿಗಾಲಲ್ಲಿ ನಿಂತಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.