
ನವದೆಹಲಿ(ಆ.08): ಅಕ್ಕ ತಮ್ಮನ ಪವಿತ್ರ ಪ್ರೀತಿಯ ಪ್ರತೀಕ ರಕ್ಷಾಬಂಧನದಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಭಾರತೀಯರೆಲ್ಲರಿಗೂ ಶುಭಾಷಯ ಕೋರಿದ್ದಾರೆ. ಆದರೆ ಇದೇ ಸಂದರ್ಭದಲ್ಲಿ ವಿಚಾರವೊಂದರ ಕುರಿತಾಗಿ ಅವರು ನಿರಾಸೆಯನ್ನೂ ವ್ಯಕ್ತಪಡಿಸಿದ್ದಾರೆ.
ಸೋಮವಾರದಂದು ತನ್ನ ಸಹೋದರಿಯೊಂದಿಗಿನ ಫೋಟೋವನ್ನು ಟ್ವಿಟರ್'ನಲ್ಲಿ ಪೋಸ್ಟ್ ಮಾಡಿದ ಕೊಹ್ಲಿ ಕೇವಲ ರಕ್ಷಾಬಂಧನಕ್ಕೆ ಶುಭಕೋರಿದ್ದಾರೆ ಮಾತ್ರವಲ್ಲದೆ ಈ ಸಂದರ್ಭದಲ್ಲಿ ತನ್ನ ಕುಟುಂಬ ಅದರಲ್ಲೂ ವಿಶೇಷವಾಗಿ ತನ್ನ ಸಹೋದರಿ ತನ್ನ ತಂಗಿ ತನ್ನೊಂದಿಗಿಲ್ಲದಿರುವುದಕ್ಕಾಗಿ ನಿರಾಸೆ ವ್ಯಕ್ತಪಡಿಸಿದ್ದಾರೆ.
ಈ ಕುರಿತಾಗಿ ತನ್ನ ಟ್ವಿಟರ್'ನಲ್ಲಿ ಬರೆದುಕೊಂಡಿರುವ ಕೊಹ್ಲಿ 'ಪ್ರತಿಯೊಬ್ಬರಿಗೂ ರಕ್ಷಾಬಂಧನದ ಹಾರ್ದಿಕ ಶುಭಾಷಯಗಳು. ಅಕ್ಕ ಹಾಗೂ ಕುಟುಂಬಸ್ಥರನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ' ಎಂದಿದ್ದಾರೆ.
ಶ್ರೀಲಂಕಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಈವರೆಗೂ ಅದ್ಭುತ ಪ್ರದರ್ಶನದ ಮೂಲಕ ಆರಂಭದ ಎರಡು ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚಿನ ಅಂತರದಿಂದ ಜಯಗಳಿಸಿದೆ. ಸದ್ಯ ತಂಡದ ಚಿತ್ತ ಮೂರನೇ ಪಂದ್ಯದಲ್ಲೂ ಜಯಗಳಿಸಿ ಸೀರೀಸ್'ನ್ಲಲಿ ಕ್ಲೀನ್ ಸ್ವೀಪ್ ಮಾಡುವ ಮೇಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.