
ಬೆಂಗಳೂರು[ನ.18]: ಇಲ್ಲಿ ಶನಿವಾರ ಮುಕ್ತಾಯವಾದ ಬೆಂಗಳೂರು ಓಪನ್ ಎಟಿಪಿ ಚಾಲೆಂಜರ್ ಟೆನಿಸ್ ಟೂರ್ನಿಯಲ್ಲಿ 4ನೇ ಶ್ರೇಯಾಂಕಿತ ಭಾರತದ ಪ್ರಜ್ನೇಶ್ ಗುಣೇಶ್ವರನ್ ಚಾಂಪಿಯನ್ ಆಗಿ ಹೊರಹೊಮ್ಮಿದರು, ಸಿಂಗಲ್ಸ್ ಫೈನಲ್ನಲ್ಲಿ ಪ್ರಜ್ನೇಶ್, ಭಾರತದವರೇ ಆದ ಸಾಕೇತ್ ಮೈನೇನಿ ವಿರುದ್ಧ 6-2, 6-2 ಸೆಟ್’ಗಳಲ್ಲಿ ಗೆಲುವು ಸಾಧಿಸಿದರು.
ಇದರೊಂದಿಗೆ ಪ್ರಜ್ನೇಶ್ ಎಟಿಪಿ ರ್ಯಾಂಕಿಂಗ್ನಲ್ಲಿ 110ನೇ ಸ್ಥಾನಕ್ಕೇರಿದರು. ಸಾಕೇತ್ ರನ್ನರ್ ಅಪ್’ಗೆ ತೃಪ್ತಿಪಟ್ಟರು. ಇಲ್ಲಿನ ಕೆಎಸ್ಎಲ್’ಟಿಎ ಟೆನಿಸ್ ಕೋರ್ಟ್ನಲ್ಲಿ ನಡೆದ ಪಂದ್ಯದ ಆರಂಭದಿಂದಲೂ ಪ್ರಜ್ನೇಶ್ ಆಕ್ರಮಣಕಾರಿ ಆಟವಾಡಿದರು.
ಆರಂಭದಲ್ಲಿ ಮುನ್ನಡೆ ಸಾಧಿಸಿದ ಪ್ರಜ್ನೇಶ್, ಸಾಕೇತ್ ಅವರ ಸರ್ವ್’ಗಳನ್ನು ಬ್ರೇಕ್ ಮಾಡಿ ಅಂಕಹೆಚ್ಚಿಸಿಕೊಂಡರು. 2 ಸೆಟ್ಗಳ ಆಟದಲ್ಲೂ 4 ಪಾಯಿಂಟ್ ಅಂತರದಿಂದ ಪ್ರಜ್ನೇಶ್ ಪಂದ್ಯ ಗೆದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.