
ಪೋರ್ಟ್ ಆಫ್ ಸ್ಪೇನ್(ಜೂ.25): ಅನಿಲ್ ಕುಂಬ್ಳೆ ಅವರು ಕೋಚ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಬಳಿಕ ತಂಡದಲ್ಲಿ ಕೊಂಚ ನಿರಾಸೆ ಮೂಡಿದ್ದು, ಅವರ ಅನುಪಸ್ಥಿತಿ ತಂಡವನ್ನು ಕಾಡುತ್ತಿದೆ ಎಂದು ಭಾರತ ಕ್ರಿಕೆಟ್ ತಂಡದ ಬ್ಯಾಟಿಂಗ್ ಕೋಚ್ ಸಂಜಯ್ ಬಾಂಗರ್ ತಿಳಿಸಿದ್ದಾರೆ.
‘ನಾವೆಲ್ಲ ವೃತ್ತಿಪರರು. ಯಾವುದೇ ಸಂಸ್ಥೆಗಳಲ್ಲಿ ಬದಲಾವಣೆ ಹಾಗೂ ಇಂತಹ ಸನ್ನಿವೇಶಗಳು ಸಾಮಾನ್ಯ. ಬೆಂಬಲಿಗ ಸಿಬ್ಬಂದಿ ಹಾಗೂ ಆಟಗಾರರು ಸಾಕಷ್ಟು ವೃತ್ತಿಪರತೆ ಪ್ರದರ್ಶಿಸಿದ್ದಾರೆ’ ಎಂದಿದ್ದಾರೆ.
‘ಇಂತಹ ವಿಷಯಗಳು ಸಂಭವಿಸಿದಾಗ ನೀವು ಅದನ್ನು ಒಪ್ಪಿಕೊಳ್ಳಬೇಕು. ಆದರೆ, ತಂಡ ಇದನ್ನೆಲ್ಲಾ ಬದಿಗೊತ್ತಿ ಮುಂದುವರಿಯಬೇಕು. ಇಲ್ಲವಾದರೆ ತಂಡದ ಪ್ರದರ್ಶನದ ಮೇಲೆ ಪರಿಣಾಮ ಬೀರಲಿದೆ’ ಎಂದು ಬಾಂಗರ್ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.