ಕೊನೆಗೂ ನನ್ನ ಕನಸು ಈಡೇರಿತು ಎಂದ ಪೆರೇರಾ

Published : Oct 22, 2017, 03:44 PM ISTUpdated : Apr 11, 2018, 01:06 PM IST
ಕೊನೆಗೂ ನನ್ನ ಕನಸು ಈಡೇರಿತು ಎಂದ ಪೆರೇರಾ

ಸಾರಾಂಶ

ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಲು ಶ್ರೀಲಂಕಾ ನಾಯಕ ಉಫುಲ್ ತರಂಗಾ ಹಿಂದೆ ಸರಿದಿದ್ದರಿಂದ ಶ್ರೀಲಂಕಾ ಕ್ರಿಕೆಟ್ ಮಂಡಳಿ ತಿಸರಾ ಪೆರೇರಾಗೆ ನಾಯಕತ್ವ ಪಟ್ಟ ಕಟ್ಟಿದೆ.

ಕೊಲಂಬೊ(ಅ.22): ಶ್ರೀಲಂಕಾ ತಂಡದ ನಾಯಕನಾಗಿ ಆಯ್ಕೆಯಾಗಿರುವುದಕ್ಕೆ ನನಗೆ ಹೆಮ್ಮೆ ಎನಿಸುತ್ತಿದೆ. ಕೊನೆಗೂ ನನ್ನ ಕನಸು ಈಡೇರಿದೆ ಎಂದು ಶ್ರೀಲಂಕಾ ತಂಡದ ನೂತನ ನಾಯಕ ತಿಸಾರ ಪೆರೇರಾ ಹೇಳಿದ್ದಾರೆ.

ಪಾಕಿಸ್ತಾನ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗೆ ನಿನ್ನೆಯಷ್ಟೇ ಪೆರೇರಾ ಅವರನ್ನು ನಾಯಕನನ್ನಾಗಿ ಆಯ್ಕೆ ಮಾಡಲಾಗಿತ್ತು.

ನನ್ನ ಬಗ್ಗೆ ನನಗೆ ನಿಜಕ್ಕೂ ಹೆಮ್ಮೆ ಎನಿಸುತ್ತಿದೆ. ಶ್ರೀಲಂಕಾ ತಂಡದ ನಾಯಕನಾಗುವುದು ನನ್ನ ಕನಸಾಗಿತ್ತು. ಅದು ಇಂದು ನನಸಾಗಿದೆ. ಇದರಿಂದ ತುಂಬಾ ಸಂತೋಷವಾಗಿದೆ ಎಂದು ಪೆರೇರಾ ಹೇಳಿದ್ದಾರೆ.

ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಲು ಶ್ರೀಲಂಕಾ ನಾಯಕ ಉಫುಲ್ ತರಂಗಾ ಹಿಂದೆ ಸರಿದಿದ್ದರಿಂದ ಶ್ರೀಲಂಕಾ ಕ್ರಿಕೆಟ್ ಮಂಡಳಿ ತಿಸರಾ ಪೆರೇರಾಗೆ ನಾಯಕತ್ವ ಪಟ್ಟ ಕಟ್ಟಿದೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೋಹಿತ್, ಜಡೇಜಾ ಅಲ್ಲ! ಟೀಂ ಇಂಡಿಯಾ ಸರಣಿ ಸೋಲಿಗೆ ಈ ಇಬ್ಬರೇ ಕಾರಣ! ನೀವೇನಂತೀರಾ?
ಕೊನೆಗೂ ಮುಗಿಯಿತಾ ಈ ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗನ ವೃತ್ತಿಬದುಕು?