
ಕೊಲಂಬೊ(ಅ.21): ಪಾಕಿಸ್ತಾನ ವಿರುದ್ಧದ 3 ಪಂದ್ಯಗಳ ಟಿ20 ಸರಣಿಗೆ ಶ್ರೀಲಂಕಾ ತಂಡ ಪ್ರಕಟಿಸಲಾಗಿದ್ದು, ಅನುಭವಿ ಆಲ್ರೌಂಡರ್ ತಿಸಾರ ಪೆರೇರಾ ತಂಡವನ್ನು ಮುನ್ನಡೆಸಲಿದ್ದಾರೆ.
ಹಾಲಿ ನಾಯಕ ಉಪುಲ್ ತರಂಗ ಲಾಹೋರ್'ಗೆ ತೆರಳಲು ನಿರಾಕರಿಸಿದ ಕಾರಣ ತಿಸಾರ ಪೆರೇರಗೆ ನಾಯಕತ್ವ ವಹಿಸಲಾಗಿದೆ. ತರಂಗ ಜತೆ ಮಾಲಿಂಗ, ಲಕ್ಮಲ್, ಡಿಕ್ವೆಲ್ಲಾ, ಕಪುಗೇಡರ ಸೇರಿ ಇನ್ನೂ ಅನೇಕರು ಪಾಕ್'ಗೆ ತೆರಳದಿರಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಮಾರ್ಚ್ 2009ರಲ್ಲಿ ಲಾಹೋರ್'ನಲ್ಲಿ ಶ್ರೀಲಂಕಾ ಆಟಗಾರರಿದ್ದ ಬಸ್ ಮೇಲೆ ಉಗ್ರಗಾಮಿಗಳು ದಾಳಿ ನಡೆಸಿದ್ದರು. ಆ ಬಳಿಕ ಶ್ರೀಲಂಕಾ ಇದೇ ಮೊದಲ ಬಾರಿಗೆ ಪಾಕಿಸ್ತಾನದಲ್ಲಿ ಕ್ರಿಕೆಟ್ ಆಡಲು ಪ್ರವಾಸ ಕೈಗೊಂಡಿದೆ. ಟೂರ್ನಿಯ ಮೊದಲೆರಡು ಪಂದ್ಯಗಳು ಅಬುದಾಬಿಯಲ್ಲಿ ನಡೆಯಲಿದ್ದು, ಮೂರನೇ ಹಾಗೂ ಕೊನೆಯ ಪಂದ್ಯ ಲಾಹೋರ್'ನಲ್ಲಿ ನಡೆಯಲಿದೆ.
ಈಗಾಗಲೇ ಪಾಕಿಸ್ತಾನ ವಿರುದ್ಧ ಶ್ರೀಲಂಕಾ ತಂಡವು ಪಂದ್ಯಗಳ ಏಕದಿನ ಸರಣಿಯಲ್ಲಿ 4-0 ಅಂತರದಲ್ಲಿ ಹೀನಾಯ ಸೋಲು ಕಂಡಿದ್ದು ಅಂತಿಮ ಪಂದ್ಯವು ಶಾರ್ಜಾದಲ್ಲಿ ನಡೆಯಲಿದೆ.
ಪ್ರಸಕ್ತ ವರ್ಷವೊಂದರಲ್ಲೇ ಶ್ರೀಲಂಕಾ ತಂಡದ 7ನೇ ನಾಯಕನಾಗಿ ತಿಸರಾ ಪೆರೇರಾ ಆಯ್ಕೆಯಾಗಿರುವುದು ಕ್ರಿಕೆಟ್ ಇತಿಹಾಸದ ಮತ್ತೊಂದು ದಾಖಲೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.