ಉಚಿತ ಪಾಸ್: ಬಿಸಿಸಿಐ ಜತೆ ಇದೀಗ ತಮಿಳ್ನಾಡು ಕ್ರಿಕೆಟ್ ಸಂಸ್ಥೆ ತಕರಾರು

Published : Oct 06, 2018, 04:22 PM IST
ಉಚಿತ ಪಾಸ್: ಬಿಸಿಸಿಐ ಜತೆ ಇದೀಗ ತಮಿಳ್ನಾಡು ಕ್ರಿಕೆಟ್ ಸಂಸ್ಥೆ ತಕರಾರು

ಸಾರಾಂಶ

ಉಚಿತ ಪಾಸ್ ಹಂಚಿಕೆ ವಿಚಾರದಲ್ಲಿ ಒಂದೊಮ್ಮೆ ಬಿಸಿಸಿಐ ತನ್ನ ನಿಲುವನ್ನು ಬದಲಿಸದಿದ್ದರೆ, ನ.11ರಂದು ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಭಾರತ-ವಿಂಡೀಸ್ ನಡುವಿನ ಟಿ20 ಪಂದ್ಯಕ್ಕೆ ಆತಿಥ್ಯ ವಹಿಸುವುದಿಲ್ಲ ಎಂದಿದೆ. ಈ ಸಂಬಂಧ ಬಿಸಿಸಿಐ ಹಾಗೂ ಸುಪ್ರೀಂಕೋರ್ಟ್ ನೇಮಿತ ಬಿಸಿಸಿಐನ ಆಡಳಿತ ಸಮಿತಿ(ಸಿಒಎ)ಗೆ ಶುಕ್ರವಾರ ಪತ್ರ ಬರೆಯುವುದಾಗಿ ಹೇಳಿದೆ.

ಚೆನ್ನೈ[ಅ.06]: ಬಿಸಿಸಿಐ ಹಾಗೂ ರಾಜ್ಯ ಕ್ರಿಕೆಟ್ ಸಂಸ್ಥೆಗಳ ನಡುವಿನ ಉಚಿತ ಪಾಸ್ ಹಂಚಿಕೆ ವಿವಾದ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮಧ್ಯ ಪ್ರದೇಶ ಕ್ರಿಕೆಟ್ ಸಂಸ್ಥೆ ಬಳಿಕ ಇದೀಗ ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್'ಸಿಎ) ತಕಾರರು ತೆಗೆದಿದೆ. 

ಇದನ್ನು ಓದಿಪಾಸ್‌ ವಿವಾದ: ಬಿಸಿಸಿಐ ನಡೆಗೆ ಗಂಗೂಲಿ ಬೇಸರ

ಉಚಿತ ಪಾಸ್ ಹಂಚಿಕೆ ವಿಚಾರದಲ್ಲಿ ಒಂದೊಮ್ಮೆ ಬಿಸಿಸಿಐ ತನ್ನ ನಿಲುವನ್ನು ಬದಲಿಸದಿದ್ದರೆ, ನ.11ರಂದು ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ನಿಗದಿಯಾಗಿರುವ ಭಾರತ-ವಿಂಡೀಸ್ ನಡುವಿನ ಟಿ20 ಪಂದ್ಯಕ್ಕೆ ಆತಿಥ್ಯ ವಹಿಸುವುದಿಲ್ಲ ಎಂದಿದೆ. ಈ ಸಂಬಂಧ ಬಿಸಿಸಿಐ ಹಾಗೂ ಸುಪ್ರೀಂಕೋರ್ಟ್ ನೇಮಿತ ಬಿಸಿಸಿಐನ ಆಡಳಿತ ಸಮಿತಿ(ಸಿಒಎ)ಗೆ ಶುಕ್ರವಾರ ಪತ್ರ ಬರೆಯುವುದಾಗಿ ಹೇಳಿದೆ.

ಇದನ್ನು ಓದಿ: ಇಂಡಿಯಾ-ವೆಸ್ಟ್ಇಂಡೀಸ್ 2ನೇ ODI ಮೈದಾನ ಬದಲು

ಬಿಸಿಸಿಐನ ನೂತನ ಸಂವಿಧಾನದ ಪ್ರಕಾರ ಕ್ರೀಡಾಂಗಣದ ಆಸನಗಳ ಸಾಮರ್ಥ್ಯದ ಶೇ.90ರಷ್ಟು ಆಸನಗಳ ಟಿಕೆಟ್‌ಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡಬೇಕು. ಇನ್ನುಳಿದ ಶೇ.10ರಷ್ಟು ಟಿಕೆಟ್'ನಲ್ಲಿ 5ರಷ್ಟನ್ನು ಬಿಸಿಸಿಐಗೆ ನೀಡಬೇಕಿದೆ. ಮಧ್ಯಪ್ರದೇಶ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕಾರಣ ಅ.24ರಂದು ಇಂದೋರ್‌ನಲ್ಲಿ ನಡೆಯಬೇಕಿದ್ದ ಭಾರತ- ವಿಂಡೀಸ್ ನಡುವಿನ ಪಂದ್ಯ ವಿಶಾಖಪಟ್ಟಣಕ್ಕೆ ಸ್ಥಳಾಂತರಗೊಂಡಿತ್ತು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶೀ ಕ್ರಿಕೆಟ್‌ನ Uncapped ಜೋಡೆತ್ತು ಖರೀದಿಸಲು ದಾಖಲೆ ಮೊತ್ತ ಖರ್ಚು ಮಾಡಿದ ಚೆನ್ನೈ ಸೂಪರ್‌ ಕಿಂಗ್ಸ್‌!
ಕ್ಯಾಮರೋನ್ ಗ್ರೀನ್ ಬಳಿಕ ಮತ್ತೋರ್ವ ಕಾಸ್ಟ್ಲಿ ಆಟಗಾರನನ್ನು ಖರೀದಿಸಿದ ಕೋಲ್ಕತಾ! ಕೆಕೆಆರ್ ಈಗ ಮತ್ತಷ್ಟು ಬಲಿಷ್ಠ