ಭಾರತ ‘ಎ’ ತಂಡದ ಟೆಸ್ಟ್ ಆತಿಥ್ಯಕ್ಕೆ ನಕಾರ; ಲೋಧಾ ಸಮಿತಿಗೆ ಶ್ರೀನಿ ಸೆಡ್ಡು...?

Published : Jan 08, 2017, 04:09 PM ISTUpdated : Apr 11, 2018, 12:47 PM IST
ಭಾರತ ‘ಎ’ ತಂಡದ ಟೆಸ್ಟ್ ಆತಿಥ್ಯಕ್ಕೆ ನಕಾರ; ಲೋಧಾ ಸಮಿತಿಗೆ ಶ್ರೀನಿ ಸೆಡ್ಡು...?

ಸಾರಾಂಶ

ವಿವಿಧ ಪ್ರಕಾರದ ದೇಶೀಯ ಕ್ರಿಕೆಟ್ ಪಂದ್ಯಾವಳಿಗಳು ನಡೆಯುತ್ತಿರುವ ನಿಮಿತ್ತ ಈ ಪಂದ್ಯಗಳನ್ನು ಚೆಪಾಕ್ ಮೈದಾನದಲ್ಲಿ ನಡೆಸಲು ಸಾಧ್ಯವಾಗುತ್ತಿಲ್ಲ’’  -ಟಿಎನ್‌'ಸಿಎ

ಚೆನ್ನೈ(ಜ.08): ಹತ್ತೊಂಭತ್ತು ವರ್ಷದೊಳಗಿನವರ ಭಾರತ ಮತ್ತು ಇಂಗ್ಲೆಂಡ್ ನಡುವಿನ ಎರಡು ಟೆಸ್ಟ್ ಪಂದ್ಯಗಳಿಗೆ ಆತಿಥ್ಯ ಹೊತ್ತುಕೊಳ್ಳಲು ಸಾಧ್ಯವಿಲ್ಲ ಎಂದು ತಮಿಳುನಾಡು ಕ್ರಿಕೆಟ್ ಸಂಸ್ಥೆ (ಟಿಎನ್‌'ಸಿಎ) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಪತ್ರ ಬರೆದಿದೆ.

ವಿವಿಧ ಪ್ರಕಾರದ ದೇಶೀಯ ಕ್ರಿಕೆಟ್ ಪಂದ್ಯಾವಳಿಗಳು ನಡೆಯುತ್ತಿರುವ ನಿಮಿತ್ತ ಈ ಪಂದ್ಯಗಳನ್ನು ಚೆಪಾಕ್ ಮೈದಾನದಲ್ಲಿ ನಡೆಸಲು ಸಾಧ್ಯವಾಗುತ್ತಿಲ್ಲ’’ ಎಂದು ಟಿಎನ್‌'ಸಿಎ, ಬಿಸಿಸಿಐನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಜೊಹ್ರಿ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ ಎಂದು ‘ದಿ ಟೈಮ್ಸ್ ಆಫ್ ಇಂಡಿಯಾ’ ವರದಿ ತಿಳಿಸಿದೆ.

ನ್ಯಾ. ಲೋಧಾ ಸಮಿತಿ ಶಿಫಾರಸುಗಳ ಅನುಷ್ಠಾನ ವಿಷಯದಲ್ಲಿ ಬಿಸಿಸಿಐ ಹಾಗೂ ರಾಜ್ಯ ಕ್ರಿಕೆಟ್ ಸಂಸ್ಥೆಗಳ ಮೇಲೆ ನಿರ್ದಾಕ್ಷಿಣ್ಯ ನಿಲುವು ತಳೆದಿರುವ ಸರ್ವೋಚ್ಚ ನ್ಯಾಯಾಲಯದ ಕ್ರಮದಿಂದಾಗಿ ಮೈದಾನವನ್ನು ಆಟಗಾರರಿಗೆ ಬಿಟ್ಟುಕೊಡದಿರಲು ಕೆಲ ರಾಜ್ಯ ಕ್ರಿಕೆಟ್ ಸಂಸ್ಥೆಗಳು ಮುಂದಾಗಿವೆ ಎಂದು ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ದಿನದ ಹಿಂದಷ್ಟೇ ವರದಿ ಮಾಡಿದ್ದು ನಿಜವೆಂಬಂತೆ ಇದು ಕಂಡುಬರುತ್ತಿದೆ ಎಂದು ಹೇಳಲಾಗಿದೆ.

ಅಂದಹಾಗೆ ಶನಿವಾರವಷ್ಟೇ ಎನ್. ಶ್ರೀನಿವಾಸನ್ ಹಾಗೂ ಇತ್ತೀಚೆಗಷ್ಟೇ ಪದಚ್ಯುತಗೊಂಡಿದ್ದ ಅನುರಾಗ್ ಠಾಕೂರ್ ಮತ್ತು ಕಾರ್ಯದರ್ಶಿ ಅಜಯ್ ಶಿರ್ಕೆ ಹಾಗೂ ಇನ್ನೂ ಕೆಲ ಕ್ರಿಕೆಟ್ ಆಡಳಿತಾಧಿಕಾರಿಗಳು ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಸಭೆ ನಡೆಸಿ ಲೋಧಾ ಸಮಿತಿ ಶಿಫಾರಸು ಕುರಿತಂತೆ ಚರ್ಚಿಸಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?