
ಬೆಂಗಳೂರು[ಜೂ.24]: ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಶತಾಯಗತಾಯ ಕಪ್ ಗೆಲ್ಲುವ ಸಂಕಲ್ಪದೊಂದಿಗೆ ಕಣಕ್ಕಿಳಿದಿರುವ ಪಿ.ಆರ್ ಶ್ರೀಜೇಶ್ ನೇತೃತ್ವದ ಭಾರತ ಹಾಕಿ ತಂಡ ಇಂದು ವಿಶ್ವದ 2ನೇ ಶ್ರೇಯಾಂಕಿತ ಬಲಿಷ್ಠ ಅರ್ಜೆಂಟೀನಾ ತಂಡವನ್ನು 2-1 ಗೋಲುಗಳಿಂದ ಮಣಿಸಿ ಜಯದ ನಗೆ ಬೀರಿದೆ.
ಉದ್ಘಾಟನಾ ಪಂದ್ಯದಲ್ಲಿ 4-0 ಗೋಲುಗಳಿಂದ ಪಾಕಿಸ್ತಾನ ತಂಡವನ್ನು ಬಗ್ಗುಬಡಿದಿದ್ದ ಹಾಕಿ ಟೀಂ ಇಂಡಿಯಾ ಇಂದೂ ಕೂಡಾ ಅದೇ ಲಯವನ್ನು ಮುಂದುವರೆಸಿದೆ. ಹರ್ಮನ್’ಪ್ರೀತ್ ಸಿಂಗ್ ಹಾಗೂ ಮನ್ದೀಪ್ ಸಿಂಗ್ ಬಾರಿಸಿದ ಎರಡು ಆಕರ್ಷಕ ಗೋಲುಗಳ ನೆರವಿನಿಂದ ಭಾರತ ತಂಡವು ಅರ್ಜೆಂಟೀನಾ ವಿರುದ್ಧ ಭರ್ಜರಿ ಜಯ ದಾಖಲಿಸಿದೆ. ಟೀಂ ಇಂಡಿಯಾದ ಈ ಗೆಲುವನ್ನು ಹಾಕಿ ಅಭಿಮಾನಿಗಳು ಮುಕ್ತಕಂಠದಿಂದ ಶ್ಲಾಘಿಸುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶ್ರೀಜೇಶ್ ಪಡೆಗೆ ಅಭಿನಂದನೆಗಳ ಮಹಾಪೂರವೇ ಹರಿದುಬರುತ್ತಿದೆ...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.