ಭಾರತ ತಂಡಕ್ಕೆ ಮಯಾಂಕ್ ಎಂಟ್ರಿ-ಮತ್ತೊಬ್ಬ ಕನ್ನಡಿಗನಿಗೆ ಕೊಕ್! ಯಾಕೆ ಹೀಗೆ?

Published : Sep 30, 2018, 05:36 PM IST
ಭಾರತ ತಂಡಕ್ಕೆ ಮಯಾಂಕ್ ಎಂಟ್ರಿ-ಮತ್ತೊಬ್ಬ ಕನ್ನಡಿಗನಿಗೆ ಕೊಕ್! ಯಾಕೆ ಹೀಗೆ?

ಸಾರಾಂಶ

ವೆಸ್ಟ್ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಕನ್ನಡಿಗ ಮಯಾಂಕ್ ಅಗರ್ವಾಲ್ ಆಯ್ಕೆಯಾದರೆ, ಮತ್ತೊರ್ವ ಕನ್ನಡಿಗನಿಗೆ ಕೊಕ್ ನೀಡಲಾಗಿದೆ. ಈ ಕುರಿತು ಟ್ವಿಟರಿಗರು ಹೇಳಿದ್ದೇನು? ಇಲ್ಲಿದೆ.  

ಮುಂಬೈ(ಸೆ.30): ವೆಸ್ಟ್ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಆಯ್ಕೆ ಹಲವು ಚರ್ಚೆಗೆ ಕಾರಣವಾಗಿದೆ. ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಸ್ಥಾನ ನೀಡಿರೋದು ಕನ್ನಡಿಗರ ಸಂತಸವನ್ನ ಇಮ್ಮಡಿಗೊಳಿಸಿದೆ. ಆದರೆ ಮತ್ತೊರ್ವ ಕನ್ನಡಿಗನಿಗೆ ಕೊಕ್ ನೀಡಿರೋದು ಬೇಸರ ತರಿಸಿದೆ.

ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಕೆಎಲ್ ರಾಹುಲ್ ಖಾಯಂ ಸ್ಥಾನ ಪಡೆದಿದ್ದಾರೆ. ರಾಹುಲ್ ಜೊತೆ ಕಳೆದ ಇಂಗ್ಲೆಂಡ್ ಸರಣಿಯಲ್ಲಿ ಕನ್ನಡಿಗ ಕರುಣ್ ನಾಯರ್ ಆಯ್ಕೆಯಾಗಿದ್ದರು. ಆದರೆ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕರುಣ್‌ಗೆ ಅವಕಾಶ ಸಿಕ್ಕಿಲ್ಲ. ಇದೀಗ ವೆಸ್ಟ್ಇಂಡೀಸ್ ಸರಣಿಗೆ ಕರುಣ್‌ಗೆ ಕೊಕ್ ನೀಡಿ, ಮಯಾಂಕ್ ಅಗರ್ವಾಲ್‌ಗೆ ಸ್ಥಾನ ನೀಡಲಾಗಿದೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ತ್ರಿಶತಕ ಸಿಡಿಸಿದ ಎರಡನೇ ಭಾರತೀಯ ಕ್ರಿಕೆಟಿಗ ಕರುಣ್ ನಾಯರ್‌ಗೆ ಕೊಕ್ ನೀಡಿರೋದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ಇಷ್ಟೇ ಅಲ್ಲ, ತಂಡಕ್ಕೆ ಆಯ್ಕೆ ಮಾಡಿ ಆಡೋ ಹನ್ನೊಂದರ ಬಳಗದಲ್ಲಿ ಅವಕಾಶ ನೀಡದೇ ಕೊನೆಗೆ ತಂಡದಿಂದಲೇ ಹೊರಬಿದ್ದ ಕರುಣ್ ನಾಯರ್ ಪರ ಟ್ವಿಟರಿಗರು ಬ್ಯಾಟ್ ಬೀಸಿದ್ದಾರೆ.

 

 

 

 

 

 

 

 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

U19 Asia Cup ವೈಭವ್ ಸೂರ್ಯವಂಶಿ ದ್ವಿಶತಕ ಜಸ್ಟ್‌ ಮಿಸ್; ಉದ್ಘಾಟನಾ ಪಂದ್ಯದಲ್ಲೇ ಬೃಹತ್ ಮೊತ್ತ ಗಳಿಸಿದ ಭಾರತ!
U19 Asia Cup: ಮತ್ತೆ ಸಿಕ್ಸರ್ ಸುರಿಮಳೆ ಹರಿಸಿ ಸ್ಪೋಟಕ ಶತಕ ಚಚ್ಚಿದ ವೈಭವ್ ಸೂರ್ಯವಂಶಿ!